ಸುಳ್ಯ: “ಸಂವಿಧಾನದ ಮೂಲ ಆಶಯ ಬದುಕುವ ಹಕ್ಕು. ನಾವು ಪ್ರಜಾಪ್ರಭುತ್ವವನ್ನು ಉಳಿಸಬೇಕು. ಇದರ ಮೂಲ ಸ್ವರೂಪವು ಉಳಿಯಬೇಕು” ಎಂದು ಖ್ಯಾತ ಅರ್ಥ ಶಾಸ್ತ್ರಜ್ಞ, ಸಾಹಿತಿ , ಯಕ್ಷಗಾನ ಕಲಾವಿದ ನೆಹರು ಮೆಮೋರಿಯಲ್ ಪದವಿ ಕಾಲೇಜು ಇಲ್ಲಿನ ನಿವೃತ್ತ ಪ್ರಾಂಶುಪಾಲ ಡಾ. ಪ್ರಭಾಕರ ಶಿಶಿಲ ಹೇಳಿದರು.
ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ಕಲಾ ವಿಭಾಗದ ಮಾನವಿಕ ಸಂಘ ದಿಂದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಭಾರತದ ಸಂವಿಧಾನಕ್ಕೆ ಅಪಾಯವಿದೆಯೇ? ಎಂಬ ಉಪನ್ಯಾಸ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು . ಭಾಷೆ, ಸಂಸ್ಕೃತಿ , ಸಾಹಿತ್ಯ, ಹಿರಿಯರ ಸಾಧನೆಗಳನ್ನು ನಾವು ರಕ್ಷಿಸಬೇಕು. ಇಲ್ಲದೇ ಹೋದಲ್ಲಿ ನಮ್ಮ ಸಾಂಸ್ಕೃತಿಕ ವೈಶಿಷ್ಟ್ಯ ನಾಶವಾಗುತ್ತದೆ. ನಾವೆಲ್ಲರೂ ಓದುವುದು , ಜಾಗೃತವಾಗುವುದು ಮತ್ತು ಪ್ರತಿಕ್ರಿಯೆ ವ್ಯಕ್ತ ಪಡಿಸುವುದನ್ನು ರೂಢಿಸಿಕೊಳ್ಳಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಅವರು ಅಧ್ಯಕ್ಷತೆ ವಹಿಸಿದ್ದರು. ಕಲಾ ವಿಭಾಗದ ಉಪನ್ಯಾಸಕಿ ರೇಷ್ಮಾ ಎಂ ಎಂ ಇವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.ವಿದ್ಯಾರ್ಥಿನಿಯರು ಆಶಯ ಗೀತೆ ಹಾಡಿದರು. ಕಲಾ ವಿಭಾಗದ ಉಪನ್ಯಾಸಕಿ ಶ್ರೀಮತಿ ಜಾನಕಿ ಟಿ ವಂದಿಸಿದರು. ವಿದ್ಯಾರ್ಥಿನಿ ಮೇಘನಾ ಎಸ್ ಕಾರ್ಯಕ್ರಮ ನಿರೂಪಿಸಿದರು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…