Advertisement
ಸುದ್ದಿಗಳು

ಭಾರತವು ವಿಶ್ವಗುರುವಾಗಲು 4ಜಿ ಬಲಿಷ್ಠವಾಗಬೇಕು

Share
ಮಂಗಳೂರು: ಭಾರತವು ಅನಾದಿ ಕಾಲದಲ್ಲಿ ವಿಶ್ವಗುರುವಾಗಿತ್ತು‌.ಆಗ ಗೋವು, ಗ್ರಾಮ, ಗುರುಕುಲ,ಗಂಗೆ ಎಂಬ 4ಜಿ ಬಲಿಷ್ಠವಾಗಿತ್ತು. ಪ್ರತಿಯೊಂದು ಗ್ರಾಮವು ಸ್ವಾವಲಂಬಿಯಾಗಿತ್ತು ಮತ್ತು ಜನರು ಸುಖೀಗಳಾಗಿದ್ದರು‌.ಗಂಗೆ ಶುಧ್ದವಾಗಿತ್ತು, ಗುರುಕುಲ ವ್ಯವಸ್ಥೆಯಿಂದ ಉಚ್ಛ ಮಟ್ಟದ ಶಿಕ್ಷಣ ನೀಡಲಾಗುತ್ತಿತ್ತು, ಅಸಂಖ್ಯಾತ ಗೋವುಗಳಿದ್ದು ಸಂಪತ್ತು ಸಮೃದ್ಧವಾಗಿತ್ತು‌, ಆದರೆ ಇಂದು ಗೋ ಹತ್ಯೆಯಿಂದಾಗಿ ಗೋ ಸಂತತಿ ನಾಶವಾಗುತ್ತಿದೆ. ಮತ್ತೊಮ್ಮೆ ಭಾರತ ವಿಶ್ವಗುರುವಾಗಬೇಕಾದರೆ ಈ 4ಜಿ ಅಂಶಗಳು ಬಲಿಷ್ಠವಾಗಬೇಕು” ಎಂದು ನ್ಯಾಯವಾದಿ ಚಂದ್ರಶೇಖರ್ ರಾವ್ ಹೇಳಿದರು.
ಅವರು ಮಂಗಳೂರಿನಲ್ಲಿ ಹಿಂದೂ ಜನಜಾಗೃತಿ ಸಮಿತಿ ಆಶ್ರಯದಲ್ಲಿ  ನಡೆಯುತ್ತಿರುವ  ಹಿಂದೂ ರಾಷ್ಟ್ರಅಧಿವೇಶನದ ಮೊದಲ ದಿನದ ಗೋಷ್ಟಿಯಲ್ಲಿ ಮಾತನಾಡಿದರು.
ಶ್ರೀ ರಾಮಚಂದ್ರಾಪುರ ಮಠದ ವಿದ್ಯಾಲಕ್ಮೀ ಮಾತನಾಡಿ ಸನಾತನ ಹಿಂದೂ ಧರ್ಮವೆಂದರೆ ಅವಿನಾಶಿ ಮತ್ತು ಅಜರಾಮರವೇ ಆಗಿದೆ. ಹಿಂದೂ ಧರ್ಮವು ಜೀವನದ ಅಂಗವಾಗಿದೆ.ಹಿಂದೂ ಧರ್ಮವು ಎಲ್ಲಾ ಜೀವಿಗಳಲ್ಲಿಯೂ ದೇವರನ್ನು ಕಾಣುವ ಅತ್ಯಂತ ಶ್ರೇಷ್ಠ ಧರ್ಮವಾಗಿದೆ‌.ಇಂದು ಇಂದಿನ ಪೀಳಿಗೆಗೆ ಧರ್ಮಶಿಕ್ಷಣವನ್ನು ನೀಡಬೇಕಾಗಿದೆ ಉಡುಪುಗಳಾಗಿರಲಿ, ಉತ್ಸವಗಳಾಗಿರಲಿ ಪಾಶ್ಚಾತ್ಯರಂತೆ ಅಲ್ಲ ಹಿಂದೂ ಧರ್ಮದಂತೆ ಆಚರಿಸಿ ಧರ್ಮದ ರಕ್ಷಣೆಯನ್ನು ಮಾಡಬೇಕಾಗಿದೆ ಎಂದರು.
ಬಂಟರ ಸಂಘದ ಆಶಾಜ್ಯೋತಿ ರೈ ಮಾತನಾಡಿ  ಪ್ರಸ್ತುತ ಹಿಂದೂ ಧರ್ಮವು ಜಾತಿ ಎಂದು ವಿಭಜನೆ ಹೊಂದಿದೆ.ಆದರೆ ಹಿಂದೂ ರಾಷ್ಟ್ರ ಸ್ಥಾಪನೆಯಾಗಬೇಕಾದರೆ ಜಾತಿ ಎಂಬ ಬಂಧನವನ್ನು ತೆಗೆದು ಕೇವಲ ‘ಹಿಂದೂ’ ಎಂದು ಒಂದಾಗಬೇಕಾಗಿದೆ..ಹಿಂದೂ ಐಕ್ಯತೆ ಹೊಂದಬೇಕಾಗಿದೆ ಎಂದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

2 minutes ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

18 minutes ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

23 minutes ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

12 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

1 day ago