Advertisement
ಸುದ್ದಿಗಳು

ಭಾರತವು ವಿಶ್ವಗುರುವಾಗಲು 4ಜಿ ಬಲಿಷ್ಠವಾಗಬೇಕು

Share
ಮಂಗಳೂರು: ಭಾರತವು ಅನಾದಿ ಕಾಲದಲ್ಲಿ ವಿಶ್ವಗುರುವಾಗಿತ್ತು‌.ಆಗ ಗೋವು, ಗ್ರಾಮ, ಗುರುಕುಲ,ಗಂಗೆ ಎಂಬ 4ಜಿ ಬಲಿಷ್ಠವಾಗಿತ್ತು. ಪ್ರತಿಯೊಂದು ಗ್ರಾಮವು ಸ್ವಾವಲಂಬಿಯಾಗಿತ್ತು ಮತ್ತು ಜನರು ಸುಖೀಗಳಾಗಿದ್ದರು‌.ಗಂಗೆ ಶುಧ್ದವಾಗಿತ್ತು, ಗುರುಕುಲ ವ್ಯವಸ್ಥೆಯಿಂದ ಉಚ್ಛ ಮಟ್ಟದ ಶಿಕ್ಷಣ ನೀಡಲಾಗುತ್ತಿತ್ತು, ಅಸಂಖ್ಯಾತ ಗೋವುಗಳಿದ್ದು ಸಂಪತ್ತು ಸಮೃದ್ಧವಾಗಿತ್ತು‌, ಆದರೆ ಇಂದು ಗೋ ಹತ್ಯೆಯಿಂದಾಗಿ ಗೋ ಸಂತತಿ ನಾಶವಾಗುತ್ತಿದೆ. ಮತ್ತೊಮ್ಮೆ ಭಾರತ ವಿಶ್ವಗುರುವಾಗಬೇಕಾದರೆ ಈ 4ಜಿ ಅಂಶಗಳು ಬಲಿಷ್ಠವಾಗಬೇಕು” ಎಂದು ನ್ಯಾಯವಾದಿ ಚಂದ್ರಶೇಖರ್ ರಾವ್ ಹೇಳಿದರು.
ಅವರು ಮಂಗಳೂರಿನಲ್ಲಿ ಹಿಂದೂ ಜನಜಾಗೃತಿ ಸಮಿತಿ ಆಶ್ರಯದಲ್ಲಿ  ನಡೆಯುತ್ತಿರುವ  ಹಿಂದೂ ರಾಷ್ಟ್ರಅಧಿವೇಶನದ ಮೊದಲ ದಿನದ ಗೋಷ್ಟಿಯಲ್ಲಿ ಮಾತನಾಡಿದರು.
ಶ್ರೀ ರಾಮಚಂದ್ರಾಪುರ ಮಠದ ವಿದ್ಯಾಲಕ್ಮೀ ಮಾತನಾಡಿ ಸನಾತನ ಹಿಂದೂ ಧರ್ಮವೆಂದರೆ ಅವಿನಾಶಿ ಮತ್ತು ಅಜರಾಮರವೇ ಆಗಿದೆ. ಹಿಂದೂ ಧರ್ಮವು ಜೀವನದ ಅಂಗವಾಗಿದೆ.ಹಿಂದೂ ಧರ್ಮವು ಎಲ್ಲಾ ಜೀವಿಗಳಲ್ಲಿಯೂ ದೇವರನ್ನು ಕಾಣುವ ಅತ್ಯಂತ ಶ್ರೇಷ್ಠ ಧರ್ಮವಾಗಿದೆ‌.ಇಂದು ಇಂದಿನ ಪೀಳಿಗೆಗೆ ಧರ್ಮಶಿಕ್ಷಣವನ್ನು ನೀಡಬೇಕಾಗಿದೆ ಉಡುಪುಗಳಾಗಿರಲಿ, ಉತ್ಸವಗಳಾಗಿರಲಿ ಪಾಶ್ಚಾತ್ಯರಂತೆ ಅಲ್ಲ ಹಿಂದೂ ಧರ್ಮದಂತೆ ಆಚರಿಸಿ ಧರ್ಮದ ರಕ್ಷಣೆಯನ್ನು ಮಾಡಬೇಕಾಗಿದೆ ಎಂದರು.
ಬಂಟರ ಸಂಘದ ಆಶಾಜ್ಯೋತಿ ರೈ ಮಾತನಾಡಿ  ಪ್ರಸ್ತುತ ಹಿಂದೂ ಧರ್ಮವು ಜಾತಿ ಎಂದು ವಿಭಜನೆ ಹೊಂದಿದೆ.ಆದರೆ ಹಿಂದೂ ರಾಷ್ಟ್ರ ಸ್ಥಾಪನೆಯಾಗಬೇಕಾದರೆ ಜಾತಿ ಎಂಬ ಬಂಧನವನ್ನು ತೆಗೆದು ಕೇವಲ ‘ಹಿಂದೂ’ ಎಂದು ಒಂದಾಗಬೇಕಾಗಿದೆ..ಹಿಂದೂ ಐಕ್ಯತೆ ಹೊಂದಬೇಕಾಗಿದೆ ಎಂದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

5 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

6 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

13 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

21 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

22 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago