Advertisement
ಸುದ್ದಿಗಳು

ಭಾರತವು ವಿಶ್ವಗುರುವಾಗಲು 4ಜಿ ಬಲಿಷ್ಠವಾಗಬೇಕು

Share
ಮಂಗಳೂರು: ಭಾರತವು ಅನಾದಿ ಕಾಲದಲ್ಲಿ ವಿಶ್ವಗುರುವಾಗಿತ್ತು‌.ಆಗ ಗೋವು, ಗ್ರಾಮ, ಗುರುಕುಲ,ಗಂಗೆ ಎಂಬ 4ಜಿ ಬಲಿಷ್ಠವಾಗಿತ್ತು. ಪ್ರತಿಯೊಂದು ಗ್ರಾಮವು ಸ್ವಾವಲಂಬಿಯಾಗಿತ್ತು ಮತ್ತು ಜನರು ಸುಖೀಗಳಾಗಿದ್ದರು‌.ಗಂಗೆ ಶುಧ್ದವಾಗಿತ್ತು, ಗುರುಕುಲ ವ್ಯವಸ್ಥೆಯಿಂದ ಉಚ್ಛ ಮಟ್ಟದ ಶಿಕ್ಷಣ ನೀಡಲಾಗುತ್ತಿತ್ತು, ಅಸಂಖ್ಯಾತ ಗೋವುಗಳಿದ್ದು ಸಂಪತ್ತು ಸಮೃದ್ಧವಾಗಿತ್ತು‌, ಆದರೆ ಇಂದು ಗೋ ಹತ್ಯೆಯಿಂದಾಗಿ ಗೋ ಸಂತತಿ ನಾಶವಾಗುತ್ತಿದೆ. ಮತ್ತೊಮ್ಮೆ ಭಾರತ ವಿಶ್ವಗುರುವಾಗಬೇಕಾದರೆ ಈ 4ಜಿ ಅಂಶಗಳು ಬಲಿಷ್ಠವಾಗಬೇಕು” ಎಂದು ನ್ಯಾಯವಾದಿ ಚಂದ್ರಶೇಖರ್ ರಾವ್ ಹೇಳಿದರು.
ಅವರು ಮಂಗಳೂರಿನಲ್ಲಿ ಹಿಂದೂ ಜನಜಾಗೃತಿ ಸಮಿತಿ ಆಶ್ರಯದಲ್ಲಿ  ನಡೆಯುತ್ತಿರುವ  ಹಿಂದೂ ರಾಷ್ಟ್ರಅಧಿವೇಶನದ ಮೊದಲ ದಿನದ ಗೋಷ್ಟಿಯಲ್ಲಿ ಮಾತನಾಡಿದರು.
ಶ್ರೀ ರಾಮಚಂದ್ರಾಪುರ ಮಠದ ವಿದ್ಯಾಲಕ್ಮೀ ಮಾತನಾಡಿ ಸನಾತನ ಹಿಂದೂ ಧರ್ಮವೆಂದರೆ ಅವಿನಾಶಿ ಮತ್ತು ಅಜರಾಮರವೇ ಆಗಿದೆ. ಹಿಂದೂ ಧರ್ಮವು ಜೀವನದ ಅಂಗವಾಗಿದೆ.ಹಿಂದೂ ಧರ್ಮವು ಎಲ್ಲಾ ಜೀವಿಗಳಲ್ಲಿಯೂ ದೇವರನ್ನು ಕಾಣುವ ಅತ್ಯಂತ ಶ್ರೇಷ್ಠ ಧರ್ಮವಾಗಿದೆ‌.ಇಂದು ಇಂದಿನ ಪೀಳಿಗೆಗೆ ಧರ್ಮಶಿಕ್ಷಣವನ್ನು ನೀಡಬೇಕಾಗಿದೆ ಉಡುಪುಗಳಾಗಿರಲಿ, ಉತ್ಸವಗಳಾಗಿರಲಿ ಪಾಶ್ಚಾತ್ಯರಂತೆ ಅಲ್ಲ ಹಿಂದೂ ಧರ್ಮದಂತೆ ಆಚರಿಸಿ ಧರ್ಮದ ರಕ್ಷಣೆಯನ್ನು ಮಾಡಬೇಕಾಗಿದೆ ಎಂದರು.
ಬಂಟರ ಸಂಘದ ಆಶಾಜ್ಯೋತಿ ರೈ ಮಾತನಾಡಿ  ಪ್ರಸ್ತುತ ಹಿಂದೂ ಧರ್ಮವು ಜಾತಿ ಎಂದು ವಿಭಜನೆ ಹೊಂದಿದೆ.ಆದರೆ ಹಿಂದೂ ರಾಷ್ಟ್ರ ಸ್ಥಾಪನೆಯಾಗಬೇಕಾದರೆ ಜಾತಿ ಎಂಬ ಬಂಧನವನ್ನು ತೆಗೆದು ಕೇವಲ ‘ಹಿಂದೂ’ ಎಂದು ಒಂದಾಗಬೇಕಾಗಿದೆ..ಹಿಂದೂ ಐಕ್ಯತೆ ಹೊಂದಬೇಕಾಗಿದೆ ಎಂದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

14 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

14 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

1 day ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

1 day ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago