Advertisement
ಸುದ್ದಿಗಳು

ಭಾರತೀಯರು ಸಹೋದರತ್ವದ ಪ್ರತಿಪಾದಕರು – ಮೋಹನ್ ಭಾಗವತ್

Share

ನಾಗಪುರ: ಭಾರತವು ದೇಶದ ಎಲ್ಲಾ ಭಾರತೀಯರಿಗೆ, ಎಲ್ಲಾ ಧರ್ಮದವರಿಗೆ ಸೇರಿದ್ದಾಗಿದೆ. ಭಾರತ ಎನ್ನುವುದೇ ಒಂದು ಪ್ರೀತಿ. ಭಾರತೀಯರು ಸೋದರತ್ವವವನ್ನು ನಂಬಿರುವವರಾಗಿದ್ದಾರೆ. ಹೀಗಾಗಿ ಪ್ರತೀ ವ್ಯಕ್ತಿಯಲ್ಲಿ ಪ್ರೀತಿ ಅಡಗಿದೆ. ವಿರೋಧ ಎನ್ನುವುದು ಇಲ್ಲ. ಆದರೆ ಪ್ರತ್ಯೇಕ ಧಾರ್ಮಿಕ ಪಠ್ಯದಲ್ಲಿನ ವಿಷಯಗಳಿಂದ ಇಂದು ಕೆಲ ಪದಗಳ ಹೇರಿಕೆಯಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಜಿ ಭಾಗವತ್ ಹೇಳಿದರು.

ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಾಲಯದಲ್ಲಿ ಮಂಗಳವಾರ ಆಯೋಜನೆಗೊಂಡಿದ್ದ ವಿಜಯದಶಮಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಹತ್ಯೆ ಎಂಬ ಪದ ಭಾರತೀಯ ನೀತಿಗಳಲ್ಲೇ ಇಲ್ಲ. ಭಾರತೀಯತೆ ಒಪ್ಪುವವರು ಹತ್ಯೆಯನ್ನು ಒಪ್ಪಲಾರರು.  ಈ ಪದದ ಮೂಲ, ಪ್ರತ್ಯೇಕ ಧಾರ್ಮಿಕ ಪಠ್ಯದಲ್ಲಿನ ಕಥೆಯಿಂದ ಬಂದಿರುವುದಾಗಿದೆ. ಭಾರತೀಯರು ಸೋದರತ್ವವವನ್ನು ನಂಬಿರುವವರಾಗಿದ್ದೇವೆ. ಭಾರತೀಯರು ಹಾಗೂ ಹಿಂದೂಗಳ ಮೇಲೆ ಇಂತಹ ಪದಗಳನ್ನು ಹೇರಿಕೆ ಮಾಡಬೇಡಿ ಎಂದರು.ಸಂವಿಧಾನ ವಿರೋಧ ಚಟುವಟಿಕೆಗಳ ವಿರುದ್ಧ ಜನರನ್ನು ಸಂಘ ಪರಿವಾರ ಎಂದಿಗೂ ಬೆಂಬಲಿಸಿಲ್ಲ. ಯಾವುದೇ ಹಲ್ಲೆ ಪ್ರಕರಣಗಳ ವಿರುದ್ಧ ಸಂಘ ಪರಿವಾರ ನಿಂತಿದೆ. ಈ ನಿಟ್ಟಿನಲ್ಲಿ ಸಂಘ ಪರಿವಾರ ಕೆಲಸ ಮಾಡುತ್ತಿದೆ. ಭಾರತ ಎಲ್ಲಾ ಭಾರತೀಯರಿಗೆ, ಎಲ್ಲಾ ಧರ್ಮದವರಿಗೆ ಸೀಮಿತವಾಗಿದೆ. ಧರ್ಮ, ಜಾತಿ ಮೇಲೆ ಯಾರೊಬ್ಬರೂ ತಾರತಮ್ಯ ಮಾಡದಂತೆ ನೋಡಿಕೊಳ್ಳುವುದು ಸರಕಾರದ ಕರ್ತವ್ಯವಾಗಿದೆ ಎಂದರು.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370 ವಿಧಿ ರದ್ದುಗೊಳಿಸುವ ಮೂಲಕ ಕೇಂದ್ರ ಸರಕಾರ ದಿಟ್ಟ ಹೆಜ್ಜೆಯನ್ನು ಇಟ್ಟಿದೆ. ಇದರಂತೆ ಜನರನ್ನು ನಿರೀಕ್ಷೆಯನ್ನು ಈಡೇರಿಸಿದೆ. ಈ ಮೂಲಕ ಜನರ ಆಶೋತ್ತರಗಳನ್ನು ಈಡೇರಿಸುವ ಧೈರ್ಯವಿದೆ ಎಂಬುದನ್ನು ಸಾಬೀತುಪಡಿಸಿದೆ ಎಂದು ಹೇಳಿದ್ದಾರೆ.

ವ್ಯಾಪಾರ ಮತ್ತು ಇತರ ಸಂಬಂಧಿತ ವಿಚಾರಗಳ ಕುರಿತು ವ್ಯಾಪಾರ ಒಪ್ಪಂದಗಳನ್ನು ನಮ್ಮದೇ ಆದ ನಿಯಮಗಳಿಗೆ ಅನುಗುಣವಾಗಿ ರೂಪಿಸಬೇಕು. ನಾವು ಸ್ವದೇಶಿಯನ್ನು ನಂಬುತ್ತೇವೆ. ಆದರೆ, ಅಂತರಾಷ್ಟ್ರೀಯ ಸಂಬಂಧಗಳನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಭಾರತಕ್ಕೆ ಹೊಸ ಆರ್ಥಿಕತೆಯ ಮಾದರಿಯ ಅವಶ್ಯಕವಿದ್ದು, ಇದರಿಂದ ಕಡಿಮೆ ಶಕ್ತಿಯಿಂದ ಉತ್ತಮ ಕಾರ್ಯಗಳು ಹೊರಬೇಕಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಜಿ ಭಾಗವತ್ ಹೇಳಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-03-2026 | ಗುಡುಗು-ಆಲಿಕಲ್ಲು ಮಳೆ ಅಲರ್ಟ್‌ | ರಾಜ್ಯಾದ್ಯಂತ ಹವಾಮಾನ ಬದಲಾವಣೆ..!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

18 hours ago

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

1 day ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

1 day ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

1 day ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

1 day ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

1 day ago