Advertisement
ಸುದ್ದಿಗಳು

ಭಾರತೀಯರು ಸಹೋದರತ್ವದ ಪ್ರತಿಪಾದಕರು – ಮೋಹನ್ ಭಾಗವತ್

Share

ನಾಗಪುರ: ಭಾರತವು ದೇಶದ ಎಲ್ಲಾ ಭಾರತೀಯರಿಗೆ, ಎಲ್ಲಾ ಧರ್ಮದವರಿಗೆ ಸೇರಿದ್ದಾಗಿದೆ. ಭಾರತ ಎನ್ನುವುದೇ ಒಂದು ಪ್ರೀತಿ. ಭಾರತೀಯರು ಸೋದರತ್ವವವನ್ನು ನಂಬಿರುವವರಾಗಿದ್ದಾರೆ. ಹೀಗಾಗಿ ಪ್ರತೀ ವ್ಯಕ್ತಿಯಲ್ಲಿ ಪ್ರೀತಿ ಅಡಗಿದೆ. ವಿರೋಧ ಎನ್ನುವುದು ಇಲ್ಲ. ಆದರೆ ಪ್ರತ್ಯೇಕ ಧಾರ್ಮಿಕ ಪಠ್ಯದಲ್ಲಿನ ವಿಷಯಗಳಿಂದ ಇಂದು ಕೆಲ ಪದಗಳ ಹೇರಿಕೆಯಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಜಿ ಭಾಗವತ್ ಹೇಳಿದರು.

ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಾಲಯದಲ್ಲಿ ಮಂಗಳವಾರ ಆಯೋಜನೆಗೊಂಡಿದ್ದ ವಿಜಯದಶಮಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಹತ್ಯೆ ಎಂಬ ಪದ ಭಾರತೀಯ ನೀತಿಗಳಲ್ಲೇ ಇಲ್ಲ. ಭಾರತೀಯತೆ ಒಪ್ಪುವವರು ಹತ್ಯೆಯನ್ನು ಒಪ್ಪಲಾರರು.  ಈ ಪದದ ಮೂಲ, ಪ್ರತ್ಯೇಕ ಧಾರ್ಮಿಕ ಪಠ್ಯದಲ್ಲಿನ ಕಥೆಯಿಂದ ಬಂದಿರುವುದಾಗಿದೆ. ಭಾರತೀಯರು ಸೋದರತ್ವವವನ್ನು ನಂಬಿರುವವರಾಗಿದ್ದೇವೆ. ಭಾರತೀಯರು ಹಾಗೂ ಹಿಂದೂಗಳ ಮೇಲೆ ಇಂತಹ ಪದಗಳನ್ನು ಹೇರಿಕೆ ಮಾಡಬೇಡಿ ಎಂದರು.ಸಂವಿಧಾನ ವಿರೋಧ ಚಟುವಟಿಕೆಗಳ ವಿರುದ್ಧ ಜನರನ್ನು ಸಂಘ ಪರಿವಾರ ಎಂದಿಗೂ ಬೆಂಬಲಿಸಿಲ್ಲ. ಯಾವುದೇ ಹಲ್ಲೆ ಪ್ರಕರಣಗಳ ವಿರುದ್ಧ ಸಂಘ ಪರಿವಾರ ನಿಂತಿದೆ. ಈ ನಿಟ್ಟಿನಲ್ಲಿ ಸಂಘ ಪರಿವಾರ ಕೆಲಸ ಮಾಡುತ್ತಿದೆ. ಭಾರತ ಎಲ್ಲಾ ಭಾರತೀಯರಿಗೆ, ಎಲ್ಲಾ ಧರ್ಮದವರಿಗೆ ಸೀಮಿತವಾಗಿದೆ. ಧರ್ಮ, ಜಾತಿ ಮೇಲೆ ಯಾರೊಬ್ಬರೂ ತಾರತಮ್ಯ ಮಾಡದಂತೆ ನೋಡಿಕೊಳ್ಳುವುದು ಸರಕಾರದ ಕರ್ತವ್ಯವಾಗಿದೆ ಎಂದರು.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370 ವಿಧಿ ರದ್ದುಗೊಳಿಸುವ ಮೂಲಕ ಕೇಂದ್ರ ಸರಕಾರ ದಿಟ್ಟ ಹೆಜ್ಜೆಯನ್ನು ಇಟ್ಟಿದೆ. ಇದರಂತೆ ಜನರನ್ನು ನಿರೀಕ್ಷೆಯನ್ನು ಈಡೇರಿಸಿದೆ. ಈ ಮೂಲಕ ಜನರ ಆಶೋತ್ತರಗಳನ್ನು ಈಡೇರಿಸುವ ಧೈರ್ಯವಿದೆ ಎಂಬುದನ್ನು ಸಾಬೀತುಪಡಿಸಿದೆ ಎಂದು ಹೇಳಿದ್ದಾರೆ.

ವ್ಯಾಪಾರ ಮತ್ತು ಇತರ ಸಂಬಂಧಿತ ವಿಚಾರಗಳ ಕುರಿತು ವ್ಯಾಪಾರ ಒಪ್ಪಂದಗಳನ್ನು ನಮ್ಮದೇ ಆದ ನಿಯಮಗಳಿಗೆ ಅನುಗುಣವಾಗಿ ರೂಪಿಸಬೇಕು. ನಾವು ಸ್ವದೇಶಿಯನ್ನು ನಂಬುತ್ತೇವೆ. ಆದರೆ, ಅಂತರಾಷ್ಟ್ರೀಯ ಸಂಬಂಧಗಳನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಭಾರತಕ್ಕೆ ಹೊಸ ಆರ್ಥಿಕತೆಯ ಮಾದರಿಯ ಅವಶ್ಯಕವಿದ್ದು, ಇದರಿಂದ ಕಡಿಮೆ ಶಕ್ತಿಯಿಂದ ಉತ್ತಮ ಕಾರ್ಯಗಳು ಹೊರಬೇಕಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಜಿ ಭಾಗವತ್ ಹೇಳಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

3 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

4 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

5 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

8 hours ago