ಭಾರತೀಯ ಕೋಸ್ಟ್‌ಗಾರ್ಡ್‌ ನಾವಿಕ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ: ಡೌನ್‌ಲೋಡ್‌ ಮಾಡಲು ಇಲ್ಲಿದೆ ಮಾಹಿತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹೊಸದಿಲ್ಲಿ: ಭಾರತೀಯ ಕೋಸ್ಟ್‌ ಗಾರ್ಡ್‌ನ ಹುದ್ದೆಯ ಪರೀಕ್ಷೆ ಏಪ್ರಿಲ್ 12ರಿಂದ ಮೇ 10ರವರೆಗೆ ನಡೆಯಲಿದ್ದು, ವಾರಾಣಸಿ, ನೋಯ್ಡಾ, ಕೋಲ್ಕತ, ಭೋಪಾಲ್‌ ಹಾಗೂ ಜೋಧಪುರ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದವರಿಗೆ ಪ್ರವೇಶ ಪತ್ರವನ್ನು ಕೋಸ್ಟ್‌ಗಾರ್ಡ್ ಬಿಡುಗಡೆ ಮಾಡಿದೆ.

Advertisement
Advertisement

ನಿರ್ದಿಷ್ಟ ಪರೀಕ್ಷಾ ಕೇಂದ್ರದಲ್ಲಿ ಹೆಚ್ಚು ಶೇಕಡಾವಾರು ಅಂಕಗಳನ್ನು ಪಡೆದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್‌ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಪಾಸಾದವರು ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಒಳಗಾಗಬೇಕಿದೆ. ಈ ಪರೀಜ್ಷಾ ವಿಧಾನಕ್ಕೆ ಎರಡು ದಿನಗಳನ್ನು ತೆಗೆದುಕೊಳ್ಳಬಹುದು

ದೈಹಿಕ ಸಾಮರ್ಥ್ಯ ಪರೀಕ್ಷೆ ( ಫಿಸಿಕಲ್‌ ಫಿಟ್ನೆಸ್‌ ಟೆಸ್ಟ್‌ ) (PFT)
ಲಿಖಿತ ಪರೀಕ್ಷೆಯಲ್ಲಿ ಪಾಸಾದ ಎಲ್ಲ ಅಭ್ಯರ್ಥಿಗಳು ಸಹ ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಒಳಗಾಗಬೇಕಿದೆ. ಇದಕ್ಕೆ ಅಭ್ಯರ್ಥಿಗಳು ಶೂ, ಟಿ – ಶರ್ಟ್, ಪ್ಯಾಂಟ್‌ ಮುಂತಾದ ಕ್ರೀಡಾ ಉಡುಪಿನಲ್ಲಿರಬೇಕು ಎಂದು ಭಾರತೀಯ ಕೋಸ್ಟ್‌ ಗಾರ್ಡ್‌ ಸಲಹೆ ನೀಡುತ್ತದೆ.

ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಏನೇನಿರುತ್ತೆ?

(i) 7 ನಿಮಿಷಗಳಲ್ಲಿ 1.6 ಕಿ.ಮೀ ಓಡಬೇಕಿದೆ
(ii) 20 ಸ್ಕ್ವಾಟ್‌ ಅಪ್ಸ್ ( ಉಠಕ್ ಬೈಠಕ್‌ )
(iii)10 ಫುಷಪ್‌ಗಳನ್ನು ಮಾಡಬೇಕಿದೆ

ಇನ್ನು, ಜನವರಿ 21 ರಿಂದ 31ರವರೆಗೆ ಆನ್‌ಲೈನ್‌ನಲ್ಲಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದವರು ತಮ್ಮ ಭಾರತೀಯ ಕೋಸ್ಟ್‌ ಗಾರ್ಡ್ ಪ್ರವೇಶ ಪರೀಕ್ಷೆಯನ್ನು ಡೌನ್ಲೋಡ್‌ ಮಾಡಬಹುದು. ಭಾರತೀಯ ಕೋಸ್ಟ್‌ ಗಾರ್ಡ್‌ನ ಅಧಿಕೃತ ವೆಬ್‌ಸೈಟ್‌ ನಲ್ಲಿ ಪ್ರವೇಶ ಪತ್ರವನ್ನು ಡೌನ್ಲೋಡ್‌ ಮಾಡಿಕೊಳ್ಳಬಹುದು.

ಭಾರತೀಯ ಕೋಸ್ಟ್‌ ಗಾರ್ಡ್ ಪ್ರವೇಶ ಪತ್ರ 2019: ಡೌನ್‌ಲೋಡ್‌ ಮಾಡುವ ವಿಧಾನ

Advertisement

1)ಭಾರತೀಯ ಕೋಸ್ಟ್‌ ಗಾರ್ಡ್ ವೆಬ್‌ಸೈಟ್ -ಅನ್ನು ಲಾಗ್‌ ಆನ್‌ ಮಾಡಿ
2) ಹೋಮ್‌ಪೇಜ್‌ನಲ್ಲಿ ಎಡ ಭಾಗದ ಟಾಪ್‌ನಲ್ಲಿ ಇ – ಪ್ರವೇಶ ಪತ್ರವನ್ನು ಪ್ರಿಂಟ್‌ ಮಾಡಿಕೊಳ್ಳುವ ಲಿಂಕ್ ಅನ್ನು ನೀಡಲಾಗಿದೆ.
3)ಆ ಲಿಂಕ್‌ ಮೇಲೆ ಕ್ಲಿಕ್‌ ಮಾಡಿದರೆ ನಿಮ್ಮ ಸ್ಕ್ರೀನ್‌ ಮೇಲೆ ಹೊಸ ಪುಟ ತೆರೆದುಕೊಳ್ಳುತ್ತದೆ
4)ನಿಮ್ಮ ರಿಜಿಸ್ಟರ್ಡ್‌ ಇ – ಮೇಲ್‌ ಐಡಿ ಅಥವಾ ಅಪ್ಲಿಕೇಷನ್‌ ನಂಬರ್‌ ಅನ್ನು ಹಾಕಿ ಮಾಹಿತಿಗಾಗಿ ಕ್ಲಿಕ್‌ ಮಾಡಿ
5)ಸ್ಕ್ರೀನ್‌ ಮೇಲೆ ನಿಮ್ಮ ಪ್ರವೇಶ ಪತ್ರ ದೊರೆಯಲಿದೆ
6) ಬಳಿಕ ಪ್ರವೇಶ ಪತ್ರ ಡೌನ್ಲೋಡ್‌ ಮಾಡಿಕೊಂಡ ಬಳಿಕ ಅದರ ಪ್ರಿಂಟ್‌ ಔಟ್‌ ತೆಗೆದುಕೊಳ್ಳಬಹುದು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…

6 hours ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

6 hours ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

9 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

9 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

9 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago