Advertisement

ಭಾರತೀಯ ಕೋಸ್ಟ್‌ಗಾರ್ಡ್‌ ನಾವಿಕ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ: ಡೌನ್‌ಲೋಡ್‌ ಮಾಡಲು ಇಲ್ಲಿದೆ ಮಾಹಿತಿ

Share

ಹೊಸದಿಲ್ಲಿ: ಭಾರತೀಯ ಕೋಸ್ಟ್‌ ಗಾರ್ಡ್‌ನ ಹುದ್ದೆಯ ಪರೀಕ್ಷೆ ಏಪ್ರಿಲ್ 12ರಿಂದ ಮೇ 10ರವರೆಗೆ ನಡೆಯಲಿದ್ದು, ವಾರಾಣಸಿ, ನೋಯ್ಡಾ, ಕೋಲ್ಕತ, ಭೋಪಾಲ್‌ ಹಾಗೂ ಜೋಧಪುರ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದವರಿಗೆ ಪ್ರವೇಶ ಪತ್ರವನ್ನು ಕೋಸ್ಟ್‌ಗಾರ್ಡ್ ಬಿಡುಗಡೆ ಮಾಡಿದೆ.

ನಿರ್ದಿಷ್ಟ ಪರೀಕ್ಷಾ ಕೇಂದ್ರದಲ್ಲಿ ಹೆಚ್ಚು ಶೇಕಡಾವಾರು ಅಂಕಗಳನ್ನು ಪಡೆದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್‌ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಪಾಸಾದವರು ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಒಳಗಾಗಬೇಕಿದೆ. ಈ ಪರೀಜ್ಷಾ ವಿಧಾನಕ್ಕೆ ಎರಡು ದಿನಗಳನ್ನು ತೆಗೆದುಕೊಳ್ಳಬಹುದು

ದೈಹಿಕ ಸಾಮರ್ಥ್ಯ ಪರೀಕ್ಷೆ ( ಫಿಸಿಕಲ್‌ ಫಿಟ್ನೆಸ್‌ ಟೆಸ್ಟ್‌ ) (PFT)
ಲಿಖಿತ ಪರೀಕ್ಷೆಯಲ್ಲಿ ಪಾಸಾದ ಎಲ್ಲ ಅಭ್ಯರ್ಥಿಗಳು ಸಹ ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಒಳಗಾಗಬೇಕಿದೆ. ಇದಕ್ಕೆ ಅಭ್ಯರ್ಥಿಗಳು ಶೂ, ಟಿ – ಶರ್ಟ್, ಪ್ಯಾಂಟ್‌ ಮುಂತಾದ ಕ್ರೀಡಾ ಉಡುಪಿನಲ್ಲಿರಬೇಕು ಎಂದು ಭಾರತೀಯ ಕೋಸ್ಟ್‌ ಗಾರ್ಡ್‌ ಸಲಹೆ ನೀಡುತ್ತದೆ.

ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಏನೇನಿರುತ್ತೆ?

(i) 7 ನಿಮಿಷಗಳಲ್ಲಿ 1.6 ಕಿ.ಮೀ ಓಡಬೇಕಿದೆ
(ii) 20 ಸ್ಕ್ವಾಟ್‌ ಅಪ್ಸ್ ( ಉಠಕ್ ಬೈಠಕ್‌ )
(iii)10 ಫುಷಪ್‌ಗಳನ್ನು ಮಾಡಬೇಕಿದೆ

ಇನ್ನು, ಜನವರಿ 21 ರಿಂದ 31ರವರೆಗೆ ಆನ್‌ಲೈನ್‌ನಲ್ಲಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದವರು ತಮ್ಮ ಭಾರತೀಯ ಕೋಸ್ಟ್‌ ಗಾರ್ಡ್ ಪ್ರವೇಶ ಪರೀಕ್ಷೆಯನ್ನು ಡೌನ್ಲೋಡ್‌ ಮಾಡಬಹುದು. ಭಾರತೀಯ ಕೋಸ್ಟ್‌ ಗಾರ್ಡ್‌ನ ಅಧಿಕೃತ ವೆಬ್‌ಸೈಟ್‌ ನಲ್ಲಿ ಪ್ರವೇಶ ಪತ್ರವನ್ನು ಡೌನ್ಲೋಡ್‌ ಮಾಡಿಕೊಳ್ಳಬಹುದು.

ಭಾರತೀಯ ಕೋಸ್ಟ್‌ ಗಾರ್ಡ್ ಪ್ರವೇಶ ಪತ್ರ 2019: ಡೌನ್‌ಲೋಡ್‌ ಮಾಡುವ ವಿಧಾನ

1)ಭಾರತೀಯ ಕೋಸ್ಟ್‌ ಗಾರ್ಡ್ ವೆಬ್‌ಸೈಟ್ -ಅನ್ನು ಲಾಗ್‌ ಆನ್‌ ಮಾಡಿ
2) ಹೋಮ್‌ಪೇಜ್‌ನಲ್ಲಿ ಎಡ ಭಾಗದ ಟಾಪ್‌ನಲ್ಲಿ ಇ – ಪ್ರವೇಶ ಪತ್ರವನ್ನು ಪ್ರಿಂಟ್‌ ಮಾಡಿಕೊಳ್ಳುವ ಲಿಂಕ್ ಅನ್ನು ನೀಡಲಾಗಿದೆ.
3)ಆ ಲಿಂಕ್‌ ಮೇಲೆ ಕ್ಲಿಕ್‌ ಮಾಡಿದರೆ ನಿಮ್ಮ ಸ್ಕ್ರೀನ್‌ ಮೇಲೆ ಹೊಸ ಪುಟ ತೆರೆದುಕೊಳ್ಳುತ್ತದೆ
4)ನಿಮ್ಮ ರಿಜಿಸ್ಟರ್ಡ್‌ ಇ – ಮೇಲ್‌ ಐಡಿ ಅಥವಾ ಅಪ್ಲಿಕೇಷನ್‌ ನಂಬರ್‌ ಅನ್ನು ಹಾಕಿ ಮಾಹಿತಿಗಾಗಿ ಕ್ಲಿಕ್‌ ಮಾಡಿ
5)ಸ್ಕ್ರೀನ್‌ ಮೇಲೆ ನಿಮ್ಮ ಪ್ರವೇಶ ಪತ್ರ ದೊರೆಯಲಿದೆ
6) ಬಳಿಕ ಪ್ರವೇಶ ಪತ್ರ ಡೌನ್ಲೋಡ್‌ ಮಾಡಿಕೊಂಡ ಬಳಿಕ ಅದರ ಪ್ರಿಂಟ್‌ ಔಟ್‌ ತೆಗೆದುಕೊಳ್ಳಬಹುದು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

16 minutes ago

ಹಲಸಿನ ಬೀಜದ ಸಿಪ್ಪೆಯಿಂದ ಕೈಗಾರಿಕಾ ಬಳಕೆಯ ಸೆಲ್ಯುಲೋಸ್..! ರೈತರಿಗೆ ಮೌಲ್ಯವರ್ಧನೆಯ ಹೊಸ ಅವಕಾಶ

ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…

5 hours ago

ಅಪ್ಪ ಯಾಕೆ ವಿಚಿತ್ರವಾಗಿ ಕಾಣುತ್ತಾನೆ?

ಬಾಲ್ಯದಲ್ಲಿ ಕಠೋರನಂತೆ ಕಾಣುವ ಅಪ್ಪನ ನಿಜವಾದ ಪ್ರೀತಿ ಮತ್ತು ತ್ಯಾಗ ನಮ್ಮ ಬದುಕಿನ…

6 hours ago

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ

ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…

17 hours ago

ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…

17 hours ago

ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…

1 day ago