ಹೊಸದಿಲ್ಲಿ: ಭಾರತೀಯ ಮೂಲದ ಅಮೆರಿಕನ್ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಪತ್ನಿ ಎಸ್ತರ್ ಡುಫ್ಲೋ ಮತ್ತು ಮೈಕಲ್ ಕ್ರೆಮರ್ 2019ನೆ ಸಾಲಿನ ನೊಬೆಲ್ ಅರ್ಥಶಾಸ್ತ್ರ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.
ಜಾಗತಿಕ ಬಡತನವನ್ನು ನಿವಾರಿಸುವಲ್ಲಿ ಪ್ರಾಯೋಗಿಕ ಪ್ರಯತ್ನಗಳಿಗಾಗಿ ಈ ಮೂವರನ್ನು ನೊಬೆಲ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸ್ವೀಡಿಶ್ ಅಕಾಡೆಮಿ ತಿಳಿಸಿದೆ.1961 ಫೆಬ್ರವರಿ 21ರಂದು ಅಭಿಜಿತ್ ಕೊಲ್ಕತ್ತಾದಲ್ಲಿ ಜನಿಸಿದರು. 1981ರಲ್ಲಿ ಕೊಲ್ಕತ್ತಾದ ಪ್ರೆಸಿಡೆನ್ಸಿ ಕಾಲೇಜಿ ನಲ್ಲಿ ಅರ್ಥಶಾಸ್ತ್ರದಲ್ಲಿ ಬಿ.ಎಸ್. ಡಿಗ್ರಿ ಪಡೆದರು. ದಿಲ್ಲಿಯ ಜವಾಹರ್ ಲಾಲ್ ನೆಹರೂ ವಿವಿಯಲ್ಲಿ ಅರ್ಥಶಾಸ್ತ್ರದ ಎಂ.ಎ. ಪದವಿ ಗಳಿಸಿದರು.
ಈ ಬಾರಿಯ ಅರ್ಥಶಾಸ್ತ್ರ ನೊಬೆಲ್ ಪುರಸ್ಕಾರವನ್ನು ಹಂಚಿಕೊಂಡಿರುವ ಮೂವರಲ್ಲಿ ಭಾರತೀಯ ಮೂಲದ ಅಮೇರಿಕನ್ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಹಾಗು ಅವರ ಸಹ ಸಂಶೋಧಕಿ ಎಸ್ತರ್ ಡಫ್ಲೊ ಅವರು ಪತಿ ಪತ್ನಿ ಎಂಬುದು ವಿಶೇಷ. ಇವರೊಂದಿಗೆ ನೊಬೆಲ್ ಹಂಚಿಕೊಂಡ ಇವರ ಇನ್ನೋರ್ವ ಸಹಸಂಶೋಧಕ ಮೈಕಲ್ ಕ್ರೆಮರ್.
ಅಭಿಜಿತ್ ಬ್ಯಾನರ್ಜಿ ಅವರು ಅಮೇರಿಕಾದ ಪ್ರತಿಷ್ಠಿತ ಮ್ಯಾಸಚುಸೆಟ್ಸ್ ಇನ್ಸ್ ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಅರ್ಥಶಾಸ್ತ್ರದ ಅಂತರ್ ರಾಷ್ಟ್ರೀಯ ಪ್ರಾಧ್ಯಾಪಕ ಹುದ್ದೆಯಲ್ಲಿದ್ದಾರೆ.
ಎಸ್ತರ್ ಡಫ್ಲೊ ಎಂ ಐ ಟಿ ಯಲ್ಲೇ ಪ್ರಾಧ್ಯಾಪಕಿಯಾಗಿದ್ದಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…