ಸುಳ್ಯ: ಭಾರತೀಯ ವೈದ್ಯಕೀಯ ಸಂಘದ ಸುಳ್ಯ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಭಾನುವಾರ ಸುಳ್ಯ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯಿತು.
ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಶಾಖೆಯ ಅಧ್ಯಕ್ಷ ಡಾ. ಮಧುಸೂದನ ಕರಿಗನೂರು ಪದಗ್ರಹಣ ನೆರವೇರಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಶಾಖೆಯ ಅಧ್ಯಕ್ಷ ಅಣ್ಣಯ್ಯ ಕುಲಾಲ್ ಮುಖ್ಯ ಅತಿಥಿಗಳಾಗಿದ್ದರು. ನೂತನ ಅಧ್ಯಕ್ಷ ಡಾ.ಬಿ.ಎನ್.ಶ್ರೀಕೃಷ್ಣ ನೇತೃತ್ವದ 2019-20ನೇ ಸಾಲಿನ ಪದಾಧಿಕಾರಿಗಳು ಅಧಿಕಾರ ವಹಿಸಿದರು. ನಿರ್ಗಮನ ಅಧ್ಯಕ್ಷೆ ಡಾ.ಗೀತಾ ದೊಪ್ಪ ಅಧಿಕಾರ ಹಸ್ತಾಂತರಿಸಿದರು.
ನೂತನ ಕಾರ್ಯದರ್ಶಿ ಡಾ. ರವಿಶಂಕರ್ ಎಸ್ ಹಾಗು ಖಜಾಂಜಿ ಡಾ. ಗಣೇಶ್.ಕೆ.ಕೆ, ಅವರಿಗೆ ನಿರ್ಗಮನ ಕಾರ್ಯದರ್ಶಿ ಡಾ. ಭರತ್ ಶೆಟ್ಟಿ ಮತ್ತು ಖಜಾಂಜಿ ಡಾ. ಅಮಿತ್ ಕುಮಾರ್ ಅಧಿಕಾರ ಹಸ್ತಾಂತರಿಸಿದರು. ರಾಜ್ಯಾಧ್ಯಕ್ಷ ಡಾ. ಮಧುಸೂದನ ಪ್ರಮಾಣ ವಚನ ಬೋಧಿಸಿದರು. ಡಾ.ಗೀತಾ ದೊಪ್ಪ ಸ್ವಾಗತಿಸಿದರು. ಡಾ. ಲಾಲಿತ್ಯ ಕಾರ್ಯಕ್ರಮ ನಿರೂಪಿಸಿದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…