ಸುಳ್ಯ: ಭಾರತೀಯ ವೈದ್ಯಕೀಯ ಸಂಘದ ಸುಳ್ಯ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಭಾನುವಾರ ಸುಳ್ಯ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯಿತು.
ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಶಾಖೆಯ ಅಧ್ಯಕ್ಷ ಡಾ. ಮಧುಸೂದನ ಕರಿಗನೂರು ಪದಗ್ರಹಣ ನೆರವೇರಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಶಾಖೆಯ ಅಧ್ಯಕ್ಷ ಅಣ್ಣಯ್ಯ ಕುಲಾಲ್ ಮುಖ್ಯ ಅತಿಥಿಗಳಾಗಿದ್ದರು. ನೂತನ ಅಧ್ಯಕ್ಷ ಡಾ.ಬಿ.ಎನ್.ಶ್ರೀಕೃಷ್ಣ ನೇತೃತ್ವದ 2019-20ನೇ ಸಾಲಿನ ಪದಾಧಿಕಾರಿಗಳು ಅಧಿಕಾರ ವಹಿಸಿದರು. ನಿರ್ಗಮನ ಅಧ್ಯಕ್ಷೆ ಡಾ.ಗೀತಾ ದೊಪ್ಪ ಅಧಿಕಾರ ಹಸ್ತಾಂತರಿಸಿದರು.
ನೂತನ ಕಾರ್ಯದರ್ಶಿ ಡಾ. ರವಿಶಂಕರ್ ಎಸ್ ಹಾಗು ಖಜಾಂಜಿ ಡಾ. ಗಣೇಶ್.ಕೆ.ಕೆ, ಅವರಿಗೆ ನಿರ್ಗಮನ ಕಾರ್ಯದರ್ಶಿ ಡಾ. ಭರತ್ ಶೆಟ್ಟಿ ಮತ್ತು ಖಜಾಂಜಿ ಡಾ. ಅಮಿತ್ ಕುಮಾರ್ ಅಧಿಕಾರ ಹಸ್ತಾಂತರಿಸಿದರು. ರಾಜ್ಯಾಧ್ಯಕ್ಷ ಡಾ. ಮಧುಸೂದನ ಪ್ರಮಾಣ ವಚನ ಬೋಧಿಸಿದರು. ಡಾ.ಗೀತಾ ದೊಪ್ಪ ಸ್ವಾಗತಿಸಿದರು. ಡಾ. ಲಾಲಿತ್ಯ ಕಾರ್ಯಕ್ರಮ ನಿರೂಪಿಸಿದರು.
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…
ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…