ಸುಳ್ಯ: ಭಾರತೀಯ ವೈದ್ಯಕೀಯ ಸಂಘದ ಸುಳ್ಯ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಭಾನುವಾರ ಸುಳ್ಯ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯಿತು.
ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಶಾಖೆಯ ಅಧ್ಯಕ್ಷ ಡಾ. ಮಧುಸೂದನ ಕರಿಗನೂರು ಪದಗ್ರಹಣ ನೆರವೇರಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಶಾಖೆಯ ಅಧ್ಯಕ್ಷ ಅಣ್ಣಯ್ಯ ಕುಲಾಲ್ ಮುಖ್ಯ ಅತಿಥಿಗಳಾಗಿದ್ದರು. ನೂತನ ಅಧ್ಯಕ್ಷ ಡಾ.ಬಿ.ಎನ್.ಶ್ರೀಕೃಷ್ಣ ನೇತೃತ್ವದ 2019-20ನೇ ಸಾಲಿನ ಪದಾಧಿಕಾರಿಗಳು ಅಧಿಕಾರ ವಹಿಸಿದರು. ನಿರ್ಗಮನ ಅಧ್ಯಕ್ಷೆ ಡಾ.ಗೀತಾ ದೊಪ್ಪ ಅಧಿಕಾರ ಹಸ್ತಾಂತರಿಸಿದರು.
ನೂತನ ಕಾರ್ಯದರ್ಶಿ ಡಾ. ರವಿಶಂಕರ್ ಎಸ್ ಹಾಗು ಖಜಾಂಜಿ ಡಾ. ಗಣೇಶ್.ಕೆ.ಕೆ, ಅವರಿಗೆ ನಿರ್ಗಮನ ಕಾರ್ಯದರ್ಶಿ ಡಾ. ಭರತ್ ಶೆಟ್ಟಿ ಮತ್ತು ಖಜಾಂಜಿ ಡಾ. ಅಮಿತ್ ಕುಮಾರ್ ಅಧಿಕಾರ ಹಸ್ತಾಂತರಿಸಿದರು. ರಾಜ್ಯಾಧ್ಯಕ್ಷ ಡಾ. ಮಧುಸೂದನ ಪ್ರಮಾಣ ವಚನ ಬೋಧಿಸಿದರು. ಡಾ.ಗೀತಾ ದೊಪ್ಪ ಸ್ವಾಗತಿಸಿದರು. ಡಾ. ಲಾಲಿತ್ಯ ಕಾರ್ಯಕ್ರಮ ನಿರೂಪಿಸಿದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…