ಸುಳ್ಯ: ಭಾರತೀಯ ವೈದ್ಯಕೀಯ ಸಂಘದ ಸುಳ್ಯ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಭಾನುವಾರ ಸುಳ್ಯ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯಿತು.
ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಶಾಖೆಯ ಅಧ್ಯಕ್ಷ ಡಾ. ಮಧುಸೂದನ ಕರಿಗನೂರು ಪದಗ್ರಹಣ ನೆರವೇರಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಶಾಖೆಯ ಅಧ್ಯಕ್ಷ ಅಣ್ಣಯ್ಯ ಕುಲಾಲ್ ಮುಖ್ಯ ಅತಿಥಿಗಳಾಗಿದ್ದರು. ನೂತನ ಅಧ್ಯಕ್ಷ ಡಾ.ಬಿ.ಎನ್.ಶ್ರೀಕೃಷ್ಣ ನೇತೃತ್ವದ 2019-20ನೇ ಸಾಲಿನ ಪದಾಧಿಕಾರಿಗಳು ಅಧಿಕಾರ ವಹಿಸಿದರು. ನಿರ್ಗಮನ ಅಧ್ಯಕ್ಷೆ ಡಾ.ಗೀತಾ ದೊಪ್ಪ ಅಧಿಕಾರ ಹಸ್ತಾಂತರಿಸಿದರು.
ನೂತನ ಕಾರ್ಯದರ್ಶಿ ಡಾ. ರವಿಶಂಕರ್ ಎಸ್ ಹಾಗು ಖಜಾಂಜಿ ಡಾ. ಗಣೇಶ್.ಕೆ.ಕೆ, ಅವರಿಗೆ ನಿರ್ಗಮನ ಕಾರ್ಯದರ್ಶಿ ಡಾ. ಭರತ್ ಶೆಟ್ಟಿ ಮತ್ತು ಖಜಾಂಜಿ ಡಾ. ಅಮಿತ್ ಕುಮಾರ್ ಅಧಿಕಾರ ಹಸ್ತಾಂತರಿಸಿದರು. ರಾಜ್ಯಾಧ್ಯಕ್ಷ ಡಾ. ಮಧುಸೂದನ ಪ್ರಮಾಣ ವಚನ ಬೋಧಿಸಿದರು. ಡಾ.ಗೀತಾ ದೊಪ್ಪ ಸ್ವಾಗತಿಸಿದರು. ಡಾ. ಲಾಲಿತ್ಯ ಕಾರ್ಯಕ್ರಮ ನಿರೂಪಿಸಿದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…