ಸುಳ್ಯ: ಭಾರತೀಯ ವೈದ್ಯಕೀಯ ಸಂಘದ ಸುಳ್ಯ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಭಾನುವಾರ ಸುಳ್ಯ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯಿತು.
ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಶಾಖೆಯ ಅಧ್ಯಕ್ಷ ಡಾ. ಮಧುಸೂದನ ಕರಿಗನೂರು ಪದಗ್ರಹಣ ನೆರವೇರಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಶಾಖೆಯ ಅಧ್ಯಕ್ಷ ಅಣ್ಣಯ್ಯ ಕುಲಾಲ್ ಮುಖ್ಯ ಅತಿಥಿಗಳಾಗಿದ್ದರು. ನೂತನ ಅಧ್ಯಕ್ಷ ಡಾ.ಬಿ.ಎನ್.ಶ್ರೀಕೃಷ್ಣ ನೇತೃತ್ವದ 2019-20ನೇ ಸಾಲಿನ ಪದಾಧಿಕಾರಿಗಳು ಅಧಿಕಾರ ವಹಿಸಿದರು. ನಿರ್ಗಮನ ಅಧ್ಯಕ್ಷೆ ಡಾ.ಗೀತಾ ದೊಪ್ಪ ಅಧಿಕಾರ ಹಸ್ತಾಂತರಿಸಿದರು.
ನೂತನ ಕಾರ್ಯದರ್ಶಿ ಡಾ. ರವಿಶಂಕರ್ ಎಸ್ ಹಾಗು ಖಜಾಂಜಿ ಡಾ. ಗಣೇಶ್.ಕೆ.ಕೆ, ಅವರಿಗೆ ನಿರ್ಗಮನ ಕಾರ್ಯದರ್ಶಿ ಡಾ. ಭರತ್ ಶೆಟ್ಟಿ ಮತ್ತು ಖಜಾಂಜಿ ಡಾ. ಅಮಿತ್ ಕುಮಾರ್ ಅಧಿಕಾರ ಹಸ್ತಾಂತರಿಸಿದರು. ರಾಜ್ಯಾಧ್ಯಕ್ಷ ಡಾ. ಮಧುಸೂದನ ಪ್ರಮಾಣ ವಚನ ಬೋಧಿಸಿದರು. ಡಾ.ಗೀತಾ ದೊಪ್ಪ ಸ್ವಾಗತಿಸಿದರು. ಡಾ. ಲಾಲಿತ್ಯ ಕಾರ್ಯಕ್ರಮ ನಿರೂಪಿಸಿದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…