ಸುಳ್ಯ: ಭಾರತೀಯ ವೈದ್ಯಕೀಯ ಸಂಘದ ಸುಳ್ಯ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಭಾನುವಾರ ಸುಳ್ಯ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯಿತು.
ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಶಾಖೆಯ ಅಧ್ಯಕ್ಷ ಡಾ. ಮಧುಸೂದನ ಕರಿಗನೂರು ಪದಗ್ರಹಣ ನೆರವೇರಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಶಾಖೆಯ ಅಧ್ಯಕ್ಷ ಅಣ್ಣಯ್ಯ ಕುಲಾಲ್ ಮುಖ್ಯ ಅತಿಥಿಗಳಾಗಿದ್ದರು. ನೂತನ ಅಧ್ಯಕ್ಷ ಡಾ.ಬಿ.ಎನ್.ಶ್ರೀಕೃಷ್ಣ ನೇತೃತ್ವದ 2019-20ನೇ ಸಾಲಿನ ಪದಾಧಿಕಾರಿಗಳು ಅಧಿಕಾರ ವಹಿಸಿದರು. ನಿರ್ಗಮನ ಅಧ್ಯಕ್ಷೆ ಡಾ.ಗೀತಾ ದೊಪ್ಪ ಅಧಿಕಾರ ಹಸ್ತಾಂತರಿಸಿದರು.
ನೂತನ ಕಾರ್ಯದರ್ಶಿ ಡಾ. ರವಿಶಂಕರ್ ಎಸ್ ಹಾಗು ಖಜಾಂಜಿ ಡಾ. ಗಣೇಶ್.ಕೆ.ಕೆ, ಅವರಿಗೆ ನಿರ್ಗಮನ ಕಾರ್ಯದರ್ಶಿ ಡಾ. ಭರತ್ ಶೆಟ್ಟಿ ಮತ್ತು ಖಜಾಂಜಿ ಡಾ. ಅಮಿತ್ ಕುಮಾರ್ ಅಧಿಕಾರ ಹಸ್ತಾಂತರಿಸಿದರು. ರಾಜ್ಯಾಧ್ಯಕ್ಷ ಡಾ. ಮಧುಸೂದನ ಪ್ರಮಾಣ ವಚನ ಬೋಧಿಸಿದರು. ಡಾ.ಗೀತಾ ದೊಪ್ಪ ಸ್ವಾಗತಿಸಿದರು. ಡಾ. ಲಾಲಿತ್ಯ ಕಾರ್ಯಕ್ರಮ ನಿರೂಪಿಸಿದರು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…