Advertisement
ಕಲೆ-ಸಂಸ್ಕೃತಿ

ಭಾರತೀಯ ಸಂಸ್ಕೃತಿಗೆ ನೃತ್ಯರೂಪಕದ ಕೊಡುಗೆ ಅಪಾರ : ಸುಬ್ರಾಯ ಚೊಕ್ಕಾಡಿ

Share

ಬೆಳ್ಳಾರೆ: ರೂಪಕವು ಒಂದು ದೃಶ್ಯಕಾವ್ಯ. ಈ ಕಾವ್ಯದ ಮೂಲಕ ಭಾರತೀಯ ಪರಂಪರೆಯ ಸತ್ವವನ್ನು ಪ್ರಸ್ತುತಪಡಿಸಲಾಗುತ್ತಿದೆ.  ಭಾರತೀಯ ಸಂಸ್ಕೃತಿಗೆ ನೃತ್ಯರೂಪಕದ ಕೊಡುಗೆ ಅಪಾರ ಎಂದು ಕವಿ ಸುಬ್ರಾಯ ಚೊಕ್ಕಾಡಿ ಹೇಳಿದರು.

Advertisement

ಅವರು ಅಜಪಿಲ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ನಡೆದ ವೈಷ್ಣವಿ ನೃತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ಅಶ್ವಿನಿ ಕೋಡಿಬೈಲು ಅವರಿಂದ ರಚಿತವಾದ “ಶಬರಿಮಲೆ ಸ್ವಾಮಿ ಅಯ್ಯಪ್ಪ” ನೃತ್ಯರೂಪಕ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಯಾವತ್ತೂ
ಬರವಣಿಗೆ ಸತ್ಯವನ್ನು ಶೋಧಿಸುವ ದಾರಿಯಾಗಿದೆ. ಸಾಹಿತ್ಯವು ರಂಗದ ಮೇಲೆ ಪ್ರದರ್ಶನಗೊಂಡಾಗ ಮಾತ್ರ ಜನಮನ ಗೆದ್ದು ಸಾರ್ಥಕತೆ ಪಡೆದುಕೊಳ್ಳುತ್ತದೆ. ಹೀಗಾಗಿ ನೃತ್ಯರೂಪಕಗಳು ಜನರು ಕಾಣುವಂತಾಗಬೇಕು ಎಂದರು.

ಪತ್ರಕರ್ತ ದುರ್ಗಾಕುಮಾರ್ ನಾಯರ್ ಕೆರೆ ಕೃತಿ ಪರಿಚಯಿಸಿದರು. ಕಾರ್ಯಕ್ರಮ ಉದ್ಘಾಟಿಸುವುದರೊಂದಿಗೆ ಅಧ್ಯಕ್ಷತೆಯನ್ನು ಇನ್ಸ್ಟಿಟ್ಯೂಟ್ ಆಫ್ ಆಟ್ರ್ಸ್ ಆಂಡ್ ಕಲ್ಚರ್ ಸಂಸ್ಥೆಯ ನೃತ್ಯಗುರು ನಯನ ವಿ.ರೈ ವಹಿಸಿದ್ದರು. ವೇದಿಕೆಯಲ್ಲಿ ಕವಯತ್ರಿ ಅಶ್ವಿನಿ ಕೋಡಿಬೈಲು ಉಪಸ್ಥಿತರಿದ್ದರು.

ವೈಷ್ಣವಿ ನಾಟ್ಯಾಲಯ ನಿರ್ದೇಶಕಿ ಯೋಗೀಶ್ವರಿ ಜಯಪ್ರಕಾಶ್ ಸ್ವಾಗತಸಿ ಪ್ರಸ್ತಾವನೆಗೈದರು. ಸ್ವಾತಿ ಕುರುಂಬುಡೆಲು ವಂದಿಸಿದರು. ಪ್ರದೀಪ್‍ಕುಮಾರ್ ರೈ ಪನ್ನೆ ಕಾರ್ಯಕ್ರಮ ನಿರೂಪಸಿದರು.

ಸಭಾಕಾರ್ಯಕ್ರಮದ ನಂತರ ವಿವಿಧ ಶೈಲಿಯ ಭರತನಾಟ್ಯ ನೃತ್ಯ ಪ್ರರ್ಶನಗೊಂಡಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

5 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

11 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

15 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

16 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

16 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago