ಬೆಳ್ಳಾರೆ: ರೂಪಕವು ಒಂದು ದೃಶ್ಯಕಾವ್ಯ. ಈ ಕಾವ್ಯದ ಮೂಲಕ ಭಾರತೀಯ ಪರಂಪರೆಯ ಸತ್ವವನ್ನು ಪ್ರಸ್ತುತಪಡಿಸಲಾಗುತ್ತಿದೆ. ಭಾರತೀಯ ಸಂಸ್ಕೃತಿಗೆ ನೃತ್ಯರೂಪಕದ ಕೊಡುಗೆ ಅಪಾರ ಎಂದು ಕವಿ ಸುಬ್ರಾಯ ಚೊಕ್ಕಾಡಿ ಹೇಳಿದರು.
ಅವರು ಅಜಪಿಲ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ನಡೆದ ವೈಷ್ಣವಿ ನೃತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ಅಶ್ವಿನಿ ಕೋಡಿಬೈಲು ಅವರಿಂದ ರಚಿತವಾದ “ಶಬರಿಮಲೆ ಸ್ವಾಮಿ ಅಯ್ಯಪ್ಪ” ನೃತ್ಯರೂಪಕ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಯಾವತ್ತೂ
ಬರವಣಿಗೆ ಸತ್ಯವನ್ನು ಶೋಧಿಸುವ ದಾರಿಯಾಗಿದೆ. ಸಾಹಿತ್ಯವು ರಂಗದ ಮೇಲೆ ಪ್ರದರ್ಶನಗೊಂಡಾಗ ಮಾತ್ರ ಜನಮನ ಗೆದ್ದು ಸಾರ್ಥಕತೆ ಪಡೆದುಕೊಳ್ಳುತ್ತದೆ. ಹೀಗಾಗಿ ನೃತ್ಯರೂಪಕಗಳು ಜನರು ಕಾಣುವಂತಾಗಬೇಕು ಎಂದರು.
ಪತ್ರಕರ್ತ ದುರ್ಗಾಕುಮಾರ್ ನಾಯರ್ ಕೆರೆ ಕೃತಿ ಪರಿಚಯಿಸಿದರು. ಕಾರ್ಯಕ್ರಮ ಉದ್ಘಾಟಿಸುವುದರೊಂದಿಗೆ ಅಧ್ಯಕ್ಷತೆಯನ್ನು ಇನ್ಸ್ಟಿಟ್ಯೂಟ್ ಆಫ್ ಆಟ್ರ್ಸ್ ಆಂಡ್ ಕಲ್ಚರ್ ಸಂಸ್ಥೆಯ ನೃತ್ಯಗುರು ನಯನ ವಿ.ರೈ ವಹಿಸಿದ್ದರು. ವೇದಿಕೆಯಲ್ಲಿ ಕವಯತ್ರಿ ಅಶ್ವಿನಿ ಕೋಡಿಬೈಲು ಉಪಸ್ಥಿತರಿದ್ದರು.
ವೈಷ್ಣವಿ ನಾಟ್ಯಾಲಯ ನಿರ್ದೇಶಕಿ ಯೋಗೀಶ್ವರಿ ಜಯಪ್ರಕಾಶ್ ಸ್ವಾಗತಸಿ ಪ್ರಸ್ತಾವನೆಗೈದರು. ಸ್ವಾತಿ ಕುರುಂಬುಡೆಲು ವಂದಿಸಿದರು. ಪ್ರದೀಪ್ಕುಮಾರ್ ರೈ ಪನ್ನೆ ಕಾರ್ಯಕ್ರಮ ನಿರೂಪಸಿದರು.
ಸಭಾಕಾರ್ಯಕ್ರಮದ ನಂತರ ವಿವಿಧ ಶೈಲಿಯ ಭರತನಾಟ್ಯ ನೃತ್ಯ ಪ್ರರ್ಶನಗೊಂಡಿತು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…