Advertisement
ಧಾರ್ಮಿಕ

ಭಾರತೀಯ ಸಂಸ್ಕೃತಿ-ಪರಂಪರೆಯ ವರ್ಧಂತಿಗೆ ಶ್ರಮಿಸೋಣ: ರಾಘವೇಶ್ವರಶ್ರೀ

Share

ಬೆಂಗಳೂರು: ಶ್ರೀಶಂಕರ ಪೀಠದ ಸಂಕಲ್ಪ- ಧ್ಯೇಯಕ್ಕೆ ಬದ್ಧರಾಗುವುದೇ ನಿಜವಾದ ಸೇವೆ. ವರ್ಧಂತಿ ಉತ್ಸವದ ಈ ಸಂದರ್ಭದಲ್ಲಿ ಭಾರತೀಯ ಪರಂಪರೆ- ಸಂಸ್ಕೃತಿ, ಧರ್ಮದ ವರ್ಧಂತಿಗೆ ಪಣತೊಡೋಣ ಎಂದು ರಾಮಚಂದ್ರಾಪುರಮಠದ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಕರೆ ನೀಡಿದರು.

Advertisement
Advertisement

ಗಿರಿನಗರದ ಶ್ರೀರಾಮಾಶ್ರಮದಲ್ಲಿ ಶುಕ್ರವಾರ ನಡೆದ ಶ್ರೀಗಳ ವರ್ಧಂತ್ಯುತ್ಸವ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು. ಪೀಠದ ಸಂಕಲ್ಪ, ಧ್ಯೇಯಕ್ಕೆ ಬದ್ಧರಾಗುವುದು ನಿಜವಾದ ಸೇವೆ. ವಿಶ್ವದ ಏಕೈಕ ಗೋಸ್ವರ್ಗ, 1300 ವರ್ಷದ ಶಂಕರ ಪರಂಪರೆಗೇ ಗೌರವ ತರುವಂಥ ವಿಷ್ಣುಗುಪ್ತ ವಿಶ್ವವಿದ್ಯಾಪೀಠದಂಥ ಸಾರ್ಥಕ ಕಾರ್ಯಗಳಿಗೆ ಕೈಜೋಡಿಸುವ ಮೂಲಕ ಸಮಾಜವನ್ನು ನಂದನವನವನ್ನಾಗಿ ಪರಿವರ್ತಿಸೋಣ ಎಂದು ಸಲಹೆ ಮಾಡಿದರು. ವರ್ಧಂತಿ ಎಂದರೆ ವೃದ್ಧಿ- ವಿಕಾಸವನ್ನು ಸೂಚಿಸುವ ಪದ; ಪ್ರತಿ ವರ್ಷ ದಾಟಿದಾಗಲೂ ವೃದ್ಧಿ- ಬೆಳವಣಿಗೆಗಳು ಆಗಬೇಕು. ಇಲ್ಲದಿದ್ದರೆ ಅದು ವ್ಯರ್ಥ. ಆದರೆ ನಮಗೆ ಎಲ್ಲ ದಿನದಂತೆ ಒಂದು ದಿನ. ಭೂಮಿಗೆ ಬಂದ ಕಾರ್ಯವನ್ನು ನೆನಪಿಗೆ ತಂದುಕೊಳ್ಳುವ ದಿನ. ನಾವು ಮಾಡಬೇಕಾದ ಕಾರ್ಯದ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳುವುದು ನೈಜ ಆಚರಣೆ ಎಂದು ಬಣ್ಣಿಸಿದರು.

ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಾಲಯದ ಧರ್ಮದರ್ಶಿಗಳಾದ ಭೀಮೇಶ್ವರ ಜೋಶಿ ದಂಪತಿಗಳು ಶ್ರೀಗುರುಭಿಕ್ಷಾಸೇವೆ ಮತ್ತು ಅಕ್ಕಿಯಿಂದ ತುಲಾಭಾರ ಸೇವೆ ನೆರವೇರಿಸಿದರು. ಅಕ್ಕಿ ಅನ್ನಪೂರ್ಣೇಶ್ವರಿಯ ಪ್ರಸಾದದ ಸಂಕೇತ. ಅದರಿಂದ ತುಲಾಭಾರ ನೆರವೇರಿಸುವುದು ಎಂದರೆ, ಅನ್ನಪೂರ್ಣೇಶ್ವರಿ ಸಂತೃಪ್ತಳಾಗಿ ಶ್ರೀಪೀಠವನ್ನು ಮೇಲೆತ್ತುವ ಸಂಕೇತ ಎಂದು ಅವರು ಅಭಿಪ್ರಾಯಪಟ್ಟರು.

ಧಾರ್ಮಿಕ ಕಾರ್ಯಕ್ರಮ:

ವರ್ಧಂತ್ಯುತ್ಸವ ಅಂಗವಾಗಿ ಬೆಳಿಗ್ಗೆ ಅರುಣ ಹೋಮ, 48 ಅರುಣ ನಮಸ್ಕಾರ, ಮಾತೆಯರಿಂದ ಮಂಗಳಾರತಿ, ರಾಜರಾಜೇಶ್ವರಿಗೆ ಬಾಗಿನ ಅರ್ಪಣೆ, ಅಷ್ಟೋತ್ತರ ಶತಕುಂಭ ಗಂಗಾಭಿಷೇಕ, ಶ್ರೀರಾಮದೇವರಿಗೆ ಅಷ್ಟಾವಧಾನ ಸೇವೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತರು ಶ್ರೀಪೀಠಕ್ಕೆ ನೀಡಿದ ರಜತ ಪೀಠಾರೋಹಣ ಕೂಡಾ ಈ ಸಂದರ್ಭದಲ್ಲಿ ನೆರವೇರಿತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

6 hours ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

6 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

6 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

7 hours ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

7 hours ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

7 hours ago