Advertisement
ಧಾರ್ಮಿಕ

ಭಾರತೀಯ ಸಂಸ್ಕೃತಿ-ಪರಂಪರೆಯ ವರ್ಧಂತಿಗೆ ಶ್ರಮಿಸೋಣ: ರಾಘವೇಶ್ವರಶ್ರೀ

Share

ಬೆಂಗಳೂರು: ಶ್ರೀಶಂಕರ ಪೀಠದ ಸಂಕಲ್ಪ- ಧ್ಯೇಯಕ್ಕೆ ಬದ್ಧರಾಗುವುದೇ ನಿಜವಾದ ಸೇವೆ. ವರ್ಧಂತಿ ಉತ್ಸವದ ಈ ಸಂದರ್ಭದಲ್ಲಿ ಭಾರತೀಯ ಪರಂಪರೆ- ಸಂಸ್ಕೃತಿ, ಧರ್ಮದ ವರ್ಧಂತಿಗೆ ಪಣತೊಡೋಣ ಎಂದು ರಾಮಚಂದ್ರಾಪುರಮಠದ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಕರೆ ನೀಡಿದರು.

ಗಿರಿನಗರದ ಶ್ರೀರಾಮಾಶ್ರಮದಲ್ಲಿ ಶುಕ್ರವಾರ ನಡೆದ ಶ್ರೀಗಳ ವರ್ಧಂತ್ಯುತ್ಸವ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು. ಪೀಠದ ಸಂಕಲ್ಪ, ಧ್ಯೇಯಕ್ಕೆ ಬದ್ಧರಾಗುವುದು ನಿಜವಾದ ಸೇವೆ. ವಿಶ್ವದ ಏಕೈಕ ಗೋಸ್ವರ್ಗ, 1300 ವರ್ಷದ ಶಂಕರ ಪರಂಪರೆಗೇ ಗೌರವ ತರುವಂಥ ವಿಷ್ಣುಗುಪ್ತ ವಿಶ್ವವಿದ್ಯಾಪೀಠದಂಥ ಸಾರ್ಥಕ ಕಾರ್ಯಗಳಿಗೆ ಕೈಜೋಡಿಸುವ ಮೂಲಕ ಸಮಾಜವನ್ನು ನಂದನವನವನ್ನಾಗಿ ಪರಿವರ್ತಿಸೋಣ ಎಂದು ಸಲಹೆ ಮಾಡಿದರು. ವರ್ಧಂತಿ ಎಂದರೆ ವೃದ್ಧಿ- ವಿಕಾಸವನ್ನು ಸೂಚಿಸುವ ಪದ; ಪ್ರತಿ ವರ್ಷ ದಾಟಿದಾಗಲೂ ವೃದ್ಧಿ- ಬೆಳವಣಿಗೆಗಳು ಆಗಬೇಕು. ಇಲ್ಲದಿದ್ದರೆ ಅದು ವ್ಯರ್ಥ. ಆದರೆ ನಮಗೆ ಎಲ್ಲ ದಿನದಂತೆ ಒಂದು ದಿನ. ಭೂಮಿಗೆ ಬಂದ ಕಾರ್ಯವನ್ನು ನೆನಪಿಗೆ ತಂದುಕೊಳ್ಳುವ ದಿನ. ನಾವು ಮಾಡಬೇಕಾದ ಕಾರ್ಯದ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳುವುದು ನೈಜ ಆಚರಣೆ ಎಂದು ಬಣ್ಣಿಸಿದರು.

Advertisement

ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಾಲಯದ ಧರ್ಮದರ್ಶಿಗಳಾದ ಭೀಮೇಶ್ವರ ಜೋಶಿ ದಂಪತಿಗಳು ಶ್ರೀಗುರುಭಿಕ್ಷಾಸೇವೆ ಮತ್ತು ಅಕ್ಕಿಯಿಂದ ತುಲಾಭಾರ ಸೇವೆ ನೆರವೇರಿಸಿದರು. ಅಕ್ಕಿ ಅನ್ನಪೂರ್ಣೇಶ್ವರಿಯ ಪ್ರಸಾದದ ಸಂಕೇತ. ಅದರಿಂದ ತುಲಾಭಾರ ನೆರವೇರಿಸುವುದು ಎಂದರೆ, ಅನ್ನಪೂರ್ಣೇಶ್ವರಿ ಸಂತೃಪ್ತಳಾಗಿ ಶ್ರೀಪೀಠವನ್ನು ಮೇಲೆತ್ತುವ ಸಂಕೇತ ಎಂದು ಅವರು ಅಭಿಪ್ರಾಯಪಟ್ಟರು.

ಧಾರ್ಮಿಕ ಕಾರ್ಯಕ್ರಮ:

Advertisement

ವರ್ಧಂತ್ಯುತ್ಸವ ಅಂಗವಾಗಿ ಬೆಳಿಗ್ಗೆ ಅರುಣ ಹೋಮ, 48 ಅರುಣ ನಮಸ್ಕಾರ, ಮಾತೆಯರಿಂದ ಮಂಗಳಾರತಿ, ರಾಜರಾಜೇಶ್ವರಿಗೆ ಬಾಗಿನ ಅರ್ಪಣೆ, ಅಷ್ಟೋತ್ತರ ಶತಕುಂಭ ಗಂಗಾಭಿಷೇಕ, ಶ್ರೀರಾಮದೇವರಿಗೆ ಅಷ್ಟಾವಧಾನ ಸೇವೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತರು ಶ್ರೀಪೀಠಕ್ಕೆ ನೀಡಿದ ರಜತ ಪೀಠಾರೋಹಣ ಕೂಡಾ ಈ ಸಂದರ್ಭದಲ್ಲಿ ನೆರವೇರಿತು.

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 390 ಆಟಗಾರರು…

3 hours ago

ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…

3 hours ago

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…

5 hours ago

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?

ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…

5 hours ago

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ

ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…

11 hours ago

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

3 days ago