Advertisement
ಧಾರ್ಮಿಕ

ಭಾರತೀಯ ಸಂಸ್ಕೃತಿ-ಪರಂಪರೆಯ ವರ್ಧಂತಿಗೆ ಶ್ರಮಿಸೋಣ: ರಾಘವೇಶ್ವರಶ್ರೀ

Share

ಬೆಂಗಳೂರು: ಶ್ರೀಶಂಕರ ಪೀಠದ ಸಂಕಲ್ಪ- ಧ್ಯೇಯಕ್ಕೆ ಬದ್ಧರಾಗುವುದೇ ನಿಜವಾದ ಸೇವೆ. ವರ್ಧಂತಿ ಉತ್ಸವದ ಈ ಸಂದರ್ಭದಲ್ಲಿ ಭಾರತೀಯ ಪರಂಪರೆ- ಸಂಸ್ಕೃತಿ, ಧರ್ಮದ ವರ್ಧಂತಿಗೆ ಪಣತೊಡೋಣ ಎಂದು ರಾಮಚಂದ್ರಾಪುರಮಠದ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಕರೆ ನೀಡಿದರು.

ಗಿರಿನಗರದ ಶ್ರೀರಾಮಾಶ್ರಮದಲ್ಲಿ ಶುಕ್ರವಾರ ನಡೆದ ಶ್ರೀಗಳ ವರ್ಧಂತ್ಯುತ್ಸವ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು. ಪೀಠದ ಸಂಕಲ್ಪ, ಧ್ಯೇಯಕ್ಕೆ ಬದ್ಧರಾಗುವುದು ನಿಜವಾದ ಸೇವೆ. ವಿಶ್ವದ ಏಕೈಕ ಗೋಸ್ವರ್ಗ, 1300 ವರ್ಷದ ಶಂಕರ ಪರಂಪರೆಗೇ ಗೌರವ ತರುವಂಥ ವಿಷ್ಣುಗುಪ್ತ ವಿಶ್ವವಿದ್ಯಾಪೀಠದಂಥ ಸಾರ್ಥಕ ಕಾರ್ಯಗಳಿಗೆ ಕೈಜೋಡಿಸುವ ಮೂಲಕ ಸಮಾಜವನ್ನು ನಂದನವನವನ್ನಾಗಿ ಪರಿವರ್ತಿಸೋಣ ಎಂದು ಸಲಹೆ ಮಾಡಿದರು. ವರ್ಧಂತಿ ಎಂದರೆ ವೃದ್ಧಿ- ವಿಕಾಸವನ್ನು ಸೂಚಿಸುವ ಪದ; ಪ್ರತಿ ವರ್ಷ ದಾಟಿದಾಗಲೂ ವೃದ್ಧಿ- ಬೆಳವಣಿಗೆಗಳು ಆಗಬೇಕು. ಇಲ್ಲದಿದ್ದರೆ ಅದು ವ್ಯರ್ಥ. ಆದರೆ ನಮಗೆ ಎಲ್ಲ ದಿನದಂತೆ ಒಂದು ದಿನ. ಭೂಮಿಗೆ ಬಂದ ಕಾರ್ಯವನ್ನು ನೆನಪಿಗೆ ತಂದುಕೊಳ್ಳುವ ದಿನ. ನಾವು ಮಾಡಬೇಕಾದ ಕಾರ್ಯದ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳುವುದು ನೈಜ ಆಚರಣೆ ಎಂದು ಬಣ್ಣಿಸಿದರು.

ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಾಲಯದ ಧರ್ಮದರ್ಶಿಗಳಾದ ಭೀಮೇಶ್ವರ ಜೋಶಿ ದಂಪತಿಗಳು ಶ್ರೀಗುರುಭಿಕ್ಷಾಸೇವೆ ಮತ್ತು ಅಕ್ಕಿಯಿಂದ ತುಲಾಭಾರ ಸೇವೆ ನೆರವೇರಿಸಿದರು. ಅಕ್ಕಿ ಅನ್ನಪೂರ್ಣೇಶ್ವರಿಯ ಪ್ರಸಾದದ ಸಂಕೇತ. ಅದರಿಂದ ತುಲಾಭಾರ ನೆರವೇರಿಸುವುದು ಎಂದರೆ, ಅನ್ನಪೂರ್ಣೇಶ್ವರಿ ಸಂತೃಪ್ತಳಾಗಿ ಶ್ರೀಪೀಠವನ್ನು ಮೇಲೆತ್ತುವ ಸಂಕೇತ ಎಂದು ಅವರು ಅಭಿಪ್ರಾಯಪಟ್ಟರು.

ಧಾರ್ಮಿಕ ಕಾರ್ಯಕ್ರಮ:

ವರ್ಧಂತ್ಯುತ್ಸವ ಅಂಗವಾಗಿ ಬೆಳಿಗ್ಗೆ ಅರುಣ ಹೋಮ, 48 ಅರುಣ ನಮಸ್ಕಾರ, ಮಾತೆಯರಿಂದ ಮಂಗಳಾರತಿ, ರಾಜರಾಜೇಶ್ವರಿಗೆ ಬಾಗಿನ ಅರ್ಪಣೆ, ಅಷ್ಟೋತ್ತರ ಶತಕುಂಭ ಗಂಗಾಭಿಷೇಕ, ಶ್ರೀರಾಮದೇವರಿಗೆ ಅಷ್ಟಾವಧಾನ ಸೇವೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತರು ಶ್ರೀಪೀಠಕ್ಕೆ ನೀಡಿದ ರಜತ ಪೀಠಾರೋಹಣ ಕೂಡಾ ಈ ಸಂದರ್ಭದಲ್ಲಿ ನೆರವೇರಿತು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

8 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

15 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

23 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago