ಬೆಂಗಳೂರು: ಶ್ರೀಶಂಕರ ಪೀಠದ ಸಂಕಲ್ಪ- ಧ್ಯೇಯಕ್ಕೆ ಬದ್ಧರಾಗುವುದೇ ನಿಜವಾದ ಸೇವೆ. ವರ್ಧಂತಿ ಉತ್ಸವದ ಈ ಸಂದರ್ಭದಲ್ಲಿ ಭಾರತೀಯ ಪರಂಪರೆ- ಸಂಸ್ಕೃತಿ, ಧರ್ಮದ ವರ್ಧಂತಿಗೆ ಪಣತೊಡೋಣ ಎಂದು ರಾಮಚಂದ್ರಾಪುರಮಠದ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಕರೆ ನೀಡಿದರು.
ಗಿರಿನಗರದ ಶ್ರೀರಾಮಾಶ್ರಮದಲ್ಲಿ ಶುಕ್ರವಾರ ನಡೆದ ಶ್ರೀಗಳ ವರ್ಧಂತ್ಯುತ್ಸವ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು. ಪೀಠದ ಸಂಕಲ್ಪ, ಧ್ಯೇಯಕ್ಕೆ ಬದ್ಧರಾಗುವುದು ನಿಜವಾದ ಸೇವೆ. ವಿಶ್ವದ ಏಕೈಕ ಗೋಸ್ವರ್ಗ, 1300 ವರ್ಷದ ಶಂಕರ ಪರಂಪರೆಗೇ ಗೌರವ ತರುವಂಥ ವಿಷ್ಣುಗುಪ್ತ ವಿಶ್ವವಿದ್ಯಾಪೀಠದಂಥ ಸಾರ್ಥಕ ಕಾರ್ಯಗಳಿಗೆ ಕೈಜೋಡಿಸುವ ಮೂಲಕ ಸಮಾಜವನ್ನು ನಂದನವನವನ್ನಾಗಿ ಪರಿವರ್ತಿಸೋಣ ಎಂದು ಸಲಹೆ ಮಾಡಿದರು. ವರ್ಧಂತಿ ಎಂದರೆ ವೃದ್ಧಿ- ವಿಕಾಸವನ್ನು ಸೂಚಿಸುವ ಪದ; ಪ್ರತಿ ವರ್ಷ ದಾಟಿದಾಗಲೂ ವೃದ್ಧಿ- ಬೆಳವಣಿಗೆಗಳು ಆಗಬೇಕು. ಇಲ್ಲದಿದ್ದರೆ ಅದು ವ್ಯರ್ಥ. ಆದರೆ ನಮಗೆ ಎಲ್ಲ ದಿನದಂತೆ ಒಂದು ದಿನ. ಭೂಮಿಗೆ ಬಂದ ಕಾರ್ಯವನ್ನು ನೆನಪಿಗೆ ತಂದುಕೊಳ್ಳುವ ದಿನ. ನಾವು ಮಾಡಬೇಕಾದ ಕಾರ್ಯದ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳುವುದು ನೈಜ ಆಚರಣೆ ಎಂದು ಬಣ್ಣಿಸಿದರು.
ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಾಲಯದ ಧರ್ಮದರ್ಶಿಗಳಾದ ಭೀಮೇಶ್ವರ ಜೋಶಿ ದಂಪತಿಗಳು ಶ್ರೀಗುರುಭಿಕ್ಷಾಸೇವೆ ಮತ್ತು ಅಕ್ಕಿಯಿಂದ ತುಲಾಭಾರ ಸೇವೆ ನೆರವೇರಿಸಿದರು. ಅಕ್ಕಿ ಅನ್ನಪೂರ್ಣೇಶ್ವರಿಯ ಪ್ರಸಾದದ ಸಂಕೇತ. ಅದರಿಂದ ತುಲಾಭಾರ ನೆರವೇರಿಸುವುದು ಎಂದರೆ, ಅನ್ನಪೂರ್ಣೇಶ್ವರಿ ಸಂತೃಪ್ತಳಾಗಿ ಶ್ರೀಪೀಠವನ್ನು ಮೇಲೆತ್ತುವ ಸಂಕೇತ ಎಂದು ಅವರು ಅಭಿಪ್ರಾಯಪಟ್ಟರು.
ಧಾರ್ಮಿಕ ಕಾರ್ಯಕ್ರಮ:
ವರ್ಧಂತ್ಯುತ್ಸವ ಅಂಗವಾಗಿ ಬೆಳಿಗ್ಗೆ ಅರುಣ ಹೋಮ, 48 ಅರುಣ ನಮಸ್ಕಾರ, ಮಾತೆಯರಿಂದ ಮಂಗಳಾರತಿ, ರಾಜರಾಜೇಶ್ವರಿಗೆ ಬಾಗಿನ ಅರ್ಪಣೆ, ಅಷ್ಟೋತ್ತರ ಶತಕುಂಭ ಗಂಗಾಭಿಷೇಕ, ಶ್ರೀರಾಮದೇವರಿಗೆ ಅಷ್ಟಾವಧಾನ ಸೇವೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತರು ಶ್ರೀಪೀಠಕ್ಕೆ ನೀಡಿದ ರಜತ ಪೀಠಾರೋಹಣ ಕೂಡಾ ಈ ಸಂದರ್ಭದಲ್ಲಿ ನೆರವೇರಿತು.
ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…
ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…
ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…
ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…
ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…
ಮಳೆಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಪರ್ಜನ್ಯ ಜಪ ನೆರವೇರಿತು.