Advertisement
ಧಾರ್ಮಿಕ

ಭಾರತೀಯ ಸಂಸ್ಕೃತಿ-ಪರಂಪರೆಯ ವರ್ಧಂತಿಗೆ ಶ್ರಮಿಸೋಣ: ರಾಘವೇಶ್ವರಶ್ರೀ

Share

ಬೆಂಗಳೂರು: ಶ್ರೀಶಂಕರ ಪೀಠದ ಸಂಕಲ್ಪ- ಧ್ಯೇಯಕ್ಕೆ ಬದ್ಧರಾಗುವುದೇ ನಿಜವಾದ ಸೇವೆ. ವರ್ಧಂತಿ ಉತ್ಸವದ ಈ ಸಂದರ್ಭದಲ್ಲಿ ಭಾರತೀಯ ಪರಂಪರೆ- ಸಂಸ್ಕೃತಿ, ಧರ್ಮದ ವರ್ಧಂತಿಗೆ ಪಣತೊಡೋಣ ಎಂದು ರಾಮಚಂದ್ರಾಪುರಮಠದ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಕರೆ ನೀಡಿದರು.

ಗಿರಿನಗರದ ಶ್ರೀರಾಮಾಶ್ರಮದಲ್ಲಿ ಶುಕ್ರವಾರ ನಡೆದ ಶ್ರೀಗಳ ವರ್ಧಂತ್ಯುತ್ಸವ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು. ಪೀಠದ ಸಂಕಲ್ಪ, ಧ್ಯೇಯಕ್ಕೆ ಬದ್ಧರಾಗುವುದು ನಿಜವಾದ ಸೇವೆ. ವಿಶ್ವದ ಏಕೈಕ ಗೋಸ್ವರ್ಗ, 1300 ವರ್ಷದ ಶಂಕರ ಪರಂಪರೆಗೇ ಗೌರವ ತರುವಂಥ ವಿಷ್ಣುಗುಪ್ತ ವಿಶ್ವವಿದ್ಯಾಪೀಠದಂಥ ಸಾರ್ಥಕ ಕಾರ್ಯಗಳಿಗೆ ಕೈಜೋಡಿಸುವ ಮೂಲಕ ಸಮಾಜವನ್ನು ನಂದನವನವನ್ನಾಗಿ ಪರಿವರ್ತಿಸೋಣ ಎಂದು ಸಲಹೆ ಮಾಡಿದರು. ವರ್ಧಂತಿ ಎಂದರೆ ವೃದ್ಧಿ- ವಿಕಾಸವನ್ನು ಸೂಚಿಸುವ ಪದ; ಪ್ರತಿ ವರ್ಷ ದಾಟಿದಾಗಲೂ ವೃದ್ಧಿ- ಬೆಳವಣಿಗೆಗಳು ಆಗಬೇಕು. ಇಲ್ಲದಿದ್ದರೆ ಅದು ವ್ಯರ್ಥ. ಆದರೆ ನಮಗೆ ಎಲ್ಲ ದಿನದಂತೆ ಒಂದು ದಿನ. ಭೂಮಿಗೆ ಬಂದ ಕಾರ್ಯವನ್ನು ನೆನಪಿಗೆ ತಂದುಕೊಳ್ಳುವ ದಿನ. ನಾವು ಮಾಡಬೇಕಾದ ಕಾರ್ಯದ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳುವುದು ನೈಜ ಆಚರಣೆ ಎಂದು ಬಣ್ಣಿಸಿದರು.

ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಾಲಯದ ಧರ್ಮದರ್ಶಿಗಳಾದ ಭೀಮೇಶ್ವರ ಜೋಶಿ ದಂಪತಿಗಳು ಶ್ರೀಗುರುಭಿಕ್ಷಾಸೇವೆ ಮತ್ತು ಅಕ್ಕಿಯಿಂದ ತುಲಾಭಾರ ಸೇವೆ ನೆರವೇರಿಸಿದರು. ಅಕ್ಕಿ ಅನ್ನಪೂರ್ಣೇಶ್ವರಿಯ ಪ್ರಸಾದದ ಸಂಕೇತ. ಅದರಿಂದ ತುಲಾಭಾರ ನೆರವೇರಿಸುವುದು ಎಂದರೆ, ಅನ್ನಪೂರ್ಣೇಶ್ವರಿ ಸಂತೃಪ್ತಳಾಗಿ ಶ್ರೀಪೀಠವನ್ನು ಮೇಲೆತ್ತುವ ಸಂಕೇತ ಎಂದು ಅವರು ಅಭಿಪ್ರಾಯಪಟ್ಟರು.

ಧಾರ್ಮಿಕ ಕಾರ್ಯಕ್ರಮ:

ವರ್ಧಂತ್ಯುತ್ಸವ ಅಂಗವಾಗಿ ಬೆಳಿಗ್ಗೆ ಅರುಣ ಹೋಮ, 48 ಅರುಣ ನಮಸ್ಕಾರ, ಮಾತೆಯರಿಂದ ಮಂಗಳಾರತಿ, ರಾಜರಾಜೇಶ್ವರಿಗೆ ಬಾಗಿನ ಅರ್ಪಣೆ, ಅಷ್ಟೋತ್ತರ ಶತಕುಂಭ ಗಂಗಾಭಿಷೇಕ, ಶ್ರೀರಾಮದೇವರಿಗೆ ಅಷ್ಟಾವಧಾನ ಸೇವೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತರು ಶ್ರೀಪೀಠಕ್ಕೆ ನೀಡಿದ ರಜತ ಪೀಠಾರೋಹಣ ಕೂಡಾ ಈ ಸಂದರ್ಭದಲ್ಲಿ ನೆರವೇರಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

7 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

8 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

13 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

15 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

15 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

17 hours ago