ಅಮರಪಡ್ನೂರು: ಚೊಕ್ಕಾಡಿ ಚಾರಿಟೇಬಲ್ ಟ್ರಸ್ಟ್ ಮತ್ತು ಮಂಗಳೂರು ಸಮರ್ಪಣಾ ಧ್ಯಾನ ಸೆಂಟರ್ನ ಸುಳ್ಯ ಶಾಖೆಯ ಸಹಯೋಗದಲ್ಲಿ ಆಯೋಜಿಸಲಾದ ಒಂದು ದಿನದ ಧ್ಯಾನ ತರಬೇತಿ ಶಿಬಿರ ಅಮರಪಡ್ನೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಶಿಬಿರವನ್ನು ನಾರಾಯಣ ಭಟ್ ಪೈಲೂರು ದೀಪ ಬೆಳಗಿಸಿ, ಮನುಷ್ಯನಲ್ಲಿರುವ ಋಣಾತ್ಮಕ ಅಂಶವನ್ನು ಕಳೆಯಲು ಧ್ಯಾನವು ಅತೀ ಉತ್ತಮ. ಹಸಿ ಮಣ್ಣಿನ ರೂಪದಂತಿರುವ ಪುಟಾಣಿಗಳಲ್ಲಿ ಅಡಗಿರುವ ಪ್ರತಿಭೆ ಹಾಗೂ ಸೃಜನಶೀಲ ಚಟುವಟಿಕೆಗಳು ಬೆಳಕಿಗೆ ಬರುವಲ್ಲಿ ಧ್ಯಾನ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಆನೆಕಾರ ಗಣಪಯ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ಶಿವಕುಮಾರ್ ಮತ್ತು ಅಧ್ಯಾಪಕ ವೃಂದದವರು ಪಾಲ್ಗೊಂಡಿದ್ದರು. ಅರ್ಚನಾ ಪ್ರಾರ್ಥಿಸಿದರು. ಶಿವಕುಮಾರ್ ಸ್ವಾಗತಿಸಿ, ವಂದಿಸಿದರು. ಪಾರ್ವತಿ ನೇಣಾರು ಕಾರ್ಯಕ್ರಮ ನಿರೂಪಿಸಿದರು.
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…