ರಾಷ್ಟ್ರೀಯ

ಭಾರತ-ನ್ಯೂಝಿಲ್ಯಾಂಡ್ ಸೆಮಿ ಫೈನಲ್‌ ಪಂದ್ಯ ಇಂದು ಮುಂದುವರಿಯಲಿದೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮ್ಯಾಂಚೆಸ್ಟರ್:  ಭಾರತ ಹಾಗೂ ನ್ಯೂಝಿಲ್ಯಾಂಡ್ ನಡುವೆ ಮಂಗಳವಾರ ನಡೆದ ಐಸಿಸಿ ಕ್ರಿಕೆಟ್ ವಿಶ್ವಕಪ್ ಸೆಮಿ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ ಪಂದ್ಯವನ್ನು ಮೀಸಲು ದಿನವಾದ ಬುಧವಾರಕ್ಕೆ ಮುಂದೂಡಲಾಗಿದೆ.

Advertisement
Advertisement

ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಾಗ ನ್ಯೂಝಿಲ್ಯಾಂಡ್ 46.1 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 211 ರನ್ ಗಳಿಸಿದೆ. ರಾಸ್ ಟೇಲರ್(ಔಟಾಗದೆ 67, 85 ಎಸೆತ, 3 ಬೌಂಡರಿ, 1 ಸಿಕ್ಸರ್) ಹಾಗೂ ಟಾಮ್ ಲಥಾಮ್(ಔಟಾಗದೆ 3)ಕ್ರೀಸ್ ಕಾಯ್ದುಕೊಂಡಿದ್ದರು. ಕಿವೀಸ್ ಸ್ಪರ್ಧಾತ್ಮಕ ಮೊತ್ತದತ್ತ ಸಾಗುತ್ತಿದ್ದಾಗ ಮಳೆ ಆಗಮಿಸಿ ಪಂದ್ಯ ಸ್ಥಗಿತಗೊಂಡಿದೆ.

ನ್ಯೂಝಿಲ್ಯಾಂಡ್ ಬುಧವಾರ ತನ್ನ ಬ್ಯಾಟಿಂಗ್ ಮುಂದುವರಿಸಿ ಇನ್ನೀಂಗ್ಸ್ ನ ಉಳಿದ 23 ಬಾಲ್ ಆಡಿದ ಬಳಿಕ ಭಾರತ ತನ್ನ ಇನ್ನೀಂಗ್ಸ್ ಆರಂಭಿಸಲಿದೆ. ಬುಧವಾರದ ಪಂದ್ಯದಲ್ಲೂ ಫಲಿತಾಂಶ ಬಾರದಿದ್ದರೆ 10 ತಂಡಗಳಿದ್ದ ಗ್ರೂಪ್ ಹಂತದ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿರುವ ಭಾರತ ಫೈನಲ್‌ಗೆ ತೇರ್ಗಡೆಯಾಗಲಿದೆ.

ಇಲ್ಲಿನ ಎಮಿರೇಟ್ಸ್​​​ ಓಲ್ಡ್​​​​​​​ ಟ್ರಾಫೋರ್ಡ್​ ಕ್ರೀಡಾಂಗಣದಲ್ಲಿ ಟಾಸ್​​ ಗೆದ್ದು ಬ್ಯಾಟಿಂಗ್​ ಮಾಡಿದ ನ್ಯೂಜಿಲೆಂಡ್​​​ 46.1 ಓವರ್​ಗಳಲ್ಲಿ 5 ವಿಕೆಟ್​ ಕಳೆದುಕೊಂಡು 211 ರನ್​ ಗಳಿಸಿ ಬ್ಯಾಟಿಂಗ್​​ ಮಾಡುವ ವೇಳೆ ಮಳೆಯಿಂದ ಪಂದ್ಯ ಸ್ಥಗಿತಗೊಂಡಿತು.
5 ಗಂಟೆಗಳಾದರೂ ಮಳೆ ನಿಲ್ಲದ ಕಾರಣ, ಐಸಿಸಿ ಹಾಗೂ ವಿಶ್ವಕಪ್​​ ಆಡಳಿತ ಮಂಡಳಿ ಬುಧವಾರದ ಮೀಸಲು ದಿನಕ್ಕೆ ಪಂದ್ಯವನ್ನು ಮುಂದೂಡಿದೆ. ಬುಧವಾರ ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 3.00ಕ್ಕೆ ಪಂದ್ಯ ಆರಂಭವಾಗಲಿದೆ. ರಾಸ್​​ ಟೇಲರ್​​​ (67*) ಹಾಗೂ ಟಾಮ್​​ ಲಾಥಮ್​ (3*)ಬ್ಯಾಟಿಂಗ್ ಮುಂದುವರಿಸುವರು.

ಭಾರತದ ಪರ ಜಸ್ಪ್ರೀತ್​ ಬುಮ್ರಾ, ಹಾರ್ದಿಕ್​ ಪಾಂಡ್ಯ, ರವೀಂದ್ರ ಜಡೇಜಾ, ಯಜುವೇಂದ್ರ ಚಾಹಲ್​ ಹಾಗೂ ಭುವನೇಶ್ವರ್​​ ಕುಮಾರ್ ​ತಲಾ ಒಂದು ವಿಕೆಟ್​ ಪಡೆದಿದ್ದಾರೆ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

7 hours ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

8 hours ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

11 hours ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

15 hours ago

ಶನಿ ಬುಧರಿಂದ ನವಪಂಚಮ ರಾಜಯೋಗ

2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…

15 hours ago

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

24 hours ago