ಮ್ಯಾಂಚೆಸ್ಟರ್: ಭಾರತ ಹಾಗೂ ನ್ಯೂಝಿಲ್ಯಾಂಡ್ ನಡುವೆ ಮಂಗಳವಾರ ನಡೆದ ಐಸಿಸಿ ಕ್ರಿಕೆಟ್ ವಿಶ್ವಕಪ್ ಸೆಮಿ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ ಪಂದ್ಯವನ್ನು ಮೀಸಲು ದಿನವಾದ ಬುಧವಾರಕ್ಕೆ ಮುಂದೂಡಲಾಗಿದೆ.
ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಾಗ ನ್ಯೂಝಿಲ್ಯಾಂಡ್ 46.1 ಓವರ್ಗಳಲ್ಲಿ 5 ವಿಕೆಟ್ಗಳ ನಷ್ಟಕ್ಕೆ 211 ರನ್ ಗಳಿಸಿದೆ. ರಾಸ್ ಟೇಲರ್(ಔಟಾಗದೆ 67, 85 ಎಸೆತ, 3 ಬೌಂಡರಿ, 1 ಸಿಕ್ಸರ್) ಹಾಗೂ ಟಾಮ್ ಲಥಾಮ್(ಔಟಾಗದೆ 3)ಕ್ರೀಸ್ ಕಾಯ್ದುಕೊಂಡಿದ್ದರು. ಕಿವೀಸ್ ಸ್ಪರ್ಧಾತ್ಮಕ ಮೊತ್ತದತ್ತ ಸಾಗುತ್ತಿದ್ದಾಗ ಮಳೆ ಆಗಮಿಸಿ ಪಂದ್ಯ ಸ್ಥಗಿತಗೊಂಡಿದೆ.
ನ್ಯೂಝಿಲ್ಯಾಂಡ್ ಬುಧವಾರ ತನ್ನ ಬ್ಯಾಟಿಂಗ್ ಮುಂದುವರಿಸಿ ಇನ್ನೀಂಗ್ಸ್ ನ ಉಳಿದ 23 ಬಾಲ್ ಆಡಿದ ಬಳಿಕ ಭಾರತ ತನ್ನ ಇನ್ನೀಂಗ್ಸ್ ಆರಂಭಿಸಲಿದೆ. ಬುಧವಾರದ ಪಂದ್ಯದಲ್ಲೂ ಫಲಿತಾಂಶ ಬಾರದಿದ್ದರೆ 10 ತಂಡಗಳಿದ್ದ ಗ್ರೂಪ್ ಹಂತದ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿರುವ ಭಾರತ ಫೈನಲ್ಗೆ ತೇರ್ಗಡೆಯಾಗಲಿದೆ.
ಇಲ್ಲಿನ ಎಮಿರೇಟ್ಸ್ ಓಲ್ಡ್ ಟ್ರಾಫೋರ್ಡ್ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 46.1 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 211 ರನ್ ಗಳಿಸಿ ಬ್ಯಾಟಿಂಗ್ ಮಾಡುವ ವೇಳೆ ಮಳೆಯಿಂದ ಪಂದ್ಯ ಸ್ಥಗಿತಗೊಂಡಿತು.
5 ಗಂಟೆಗಳಾದರೂ ಮಳೆ ನಿಲ್ಲದ ಕಾರಣ, ಐಸಿಸಿ ಹಾಗೂ ವಿಶ್ವಕಪ್ ಆಡಳಿತ ಮಂಡಳಿ ಬುಧವಾರದ ಮೀಸಲು ದಿನಕ್ಕೆ ಪಂದ್ಯವನ್ನು ಮುಂದೂಡಿದೆ. ಬುಧವಾರ ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 3.00ಕ್ಕೆ ಪಂದ್ಯ ಆರಂಭವಾಗಲಿದೆ. ರಾಸ್ ಟೇಲರ್ (67*) ಹಾಗೂ ಟಾಮ್ ಲಾಥಮ್ (3*)ಬ್ಯಾಟಿಂಗ್ ಮುಂದುವರಿಸುವರು.
ಭಾರತದ ಪರ ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯಜುವೇಂದ್ರ ಚಾಹಲ್ ಹಾಗೂ ಭುವನೇಶ್ವರ್ ಕುಮಾರ್ ತಲಾ ಒಂದು ವಿಕೆಟ್ ಪಡೆದಿದ್ದಾರೆ
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…
ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…