Advertisement
ರಾಷ್ಟ್ರೀಯ

ಭಾರತ-ನ್ಯೂಝಿಲ್ಯಾಂಡ್ ಸೆಮಿ ಫೈನಲ್‌ ಪಂದ್ಯ ಇಂದು ಮುಂದುವರಿಯಲಿದೆ

Share

ಮ್ಯಾಂಚೆಸ್ಟರ್:  ಭಾರತ ಹಾಗೂ ನ್ಯೂಝಿಲ್ಯಾಂಡ್ ನಡುವೆ ಮಂಗಳವಾರ ನಡೆದ ಐಸಿಸಿ ಕ್ರಿಕೆಟ್ ವಿಶ್ವಕಪ್ ಸೆಮಿ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ ಪಂದ್ಯವನ್ನು ಮೀಸಲು ದಿನವಾದ ಬುಧವಾರಕ್ಕೆ ಮುಂದೂಡಲಾಗಿದೆ.

ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಾಗ ನ್ಯೂಝಿಲ್ಯಾಂಡ್ 46.1 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 211 ರನ್ ಗಳಿಸಿದೆ. ರಾಸ್ ಟೇಲರ್(ಔಟಾಗದೆ 67, 85 ಎಸೆತ, 3 ಬೌಂಡರಿ, 1 ಸಿಕ್ಸರ್) ಹಾಗೂ ಟಾಮ್ ಲಥಾಮ್(ಔಟಾಗದೆ 3)ಕ್ರೀಸ್ ಕಾಯ್ದುಕೊಂಡಿದ್ದರು. ಕಿವೀಸ್ ಸ್ಪರ್ಧಾತ್ಮಕ ಮೊತ್ತದತ್ತ ಸಾಗುತ್ತಿದ್ದಾಗ ಮಳೆ ಆಗಮಿಸಿ ಪಂದ್ಯ ಸ್ಥಗಿತಗೊಂಡಿದೆ.

ನ್ಯೂಝಿಲ್ಯಾಂಡ್ ಬುಧವಾರ ತನ್ನ ಬ್ಯಾಟಿಂಗ್ ಮುಂದುವರಿಸಿ ಇನ್ನೀಂಗ್ಸ್ ನ ಉಳಿದ 23 ಬಾಲ್ ಆಡಿದ ಬಳಿಕ ಭಾರತ ತನ್ನ ಇನ್ನೀಂಗ್ಸ್ ಆರಂಭಿಸಲಿದೆ. ಬುಧವಾರದ ಪಂದ್ಯದಲ್ಲೂ ಫಲಿತಾಂಶ ಬಾರದಿದ್ದರೆ 10 ತಂಡಗಳಿದ್ದ ಗ್ರೂಪ್ ಹಂತದ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿರುವ ಭಾರತ ಫೈನಲ್‌ಗೆ ತೇರ್ಗಡೆಯಾಗಲಿದೆ.

ಇಲ್ಲಿನ ಎಮಿರೇಟ್ಸ್​​​ ಓಲ್ಡ್​​​​​​​ ಟ್ರಾಫೋರ್ಡ್​ ಕ್ರೀಡಾಂಗಣದಲ್ಲಿ ಟಾಸ್​​ ಗೆದ್ದು ಬ್ಯಾಟಿಂಗ್​ ಮಾಡಿದ ನ್ಯೂಜಿಲೆಂಡ್​​​ 46.1 ಓವರ್​ಗಳಲ್ಲಿ 5 ವಿಕೆಟ್​ ಕಳೆದುಕೊಂಡು 211 ರನ್​ ಗಳಿಸಿ ಬ್ಯಾಟಿಂಗ್​​ ಮಾಡುವ ವೇಳೆ ಮಳೆಯಿಂದ ಪಂದ್ಯ ಸ್ಥಗಿತಗೊಂಡಿತು.
5 ಗಂಟೆಗಳಾದರೂ ಮಳೆ ನಿಲ್ಲದ ಕಾರಣ, ಐಸಿಸಿ ಹಾಗೂ ವಿಶ್ವಕಪ್​​ ಆಡಳಿತ ಮಂಡಳಿ ಬುಧವಾರದ ಮೀಸಲು ದಿನಕ್ಕೆ ಪಂದ್ಯವನ್ನು ಮುಂದೂಡಿದೆ. ಬುಧವಾರ ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 3.00ಕ್ಕೆ ಪಂದ್ಯ ಆರಂಭವಾಗಲಿದೆ. ರಾಸ್​​ ಟೇಲರ್​​​ (67*) ಹಾಗೂ ಟಾಮ್​​ ಲಾಥಮ್​ (3*)ಬ್ಯಾಟಿಂಗ್ ಮುಂದುವರಿಸುವರು.

ಭಾರತದ ಪರ ಜಸ್ಪ್ರೀತ್​ ಬುಮ್ರಾ, ಹಾರ್ದಿಕ್​ ಪಾಂಡ್ಯ, ರವೀಂದ್ರ ಜಡೇಜಾ, ಯಜುವೇಂದ್ರ ಚಾಹಲ್​ ಹಾಗೂ ಭುವನೇಶ್ವರ್​​ ಕುಮಾರ್ ​ತಲಾ ಒಂದು ವಿಕೆಟ್​ ಪಡೆದಿದ್ದಾರೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

4 hours ago

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…

5 hours ago

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

13 hours ago

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…

21 hours ago

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

1 day ago

ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!

ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…

1 day ago