Advertisement
ರಾಷ್ಟ್ರೀಯ

ಭಾರತ-ನ್ಯೂಝಿಲ್ಯಾಂಡ್ ಸೆಮಿ ಫೈನಲ್‌ ಪಂದ್ಯ ಇಂದು ಮುಂದುವರಿಯಲಿದೆ

Share

ಮ್ಯಾಂಚೆಸ್ಟರ್:  ಭಾರತ ಹಾಗೂ ನ್ಯೂಝಿಲ್ಯಾಂಡ್ ನಡುವೆ ಮಂಗಳವಾರ ನಡೆದ ಐಸಿಸಿ ಕ್ರಿಕೆಟ್ ವಿಶ್ವಕಪ್ ಸೆಮಿ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ ಪಂದ್ಯವನ್ನು ಮೀಸಲು ದಿನವಾದ ಬುಧವಾರಕ್ಕೆ ಮುಂದೂಡಲಾಗಿದೆ.

Advertisement
Advertisement

ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಾಗ ನ್ಯೂಝಿಲ್ಯಾಂಡ್ 46.1 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 211 ರನ್ ಗಳಿಸಿದೆ. ರಾಸ್ ಟೇಲರ್(ಔಟಾಗದೆ 67, 85 ಎಸೆತ, 3 ಬೌಂಡರಿ, 1 ಸಿಕ್ಸರ್) ಹಾಗೂ ಟಾಮ್ ಲಥಾಮ್(ಔಟಾಗದೆ 3)ಕ್ರೀಸ್ ಕಾಯ್ದುಕೊಂಡಿದ್ದರು. ಕಿವೀಸ್ ಸ್ಪರ್ಧಾತ್ಮಕ ಮೊತ್ತದತ್ತ ಸಾಗುತ್ತಿದ್ದಾಗ ಮಳೆ ಆಗಮಿಸಿ ಪಂದ್ಯ ಸ್ಥಗಿತಗೊಂಡಿದೆ.

ನ್ಯೂಝಿಲ್ಯಾಂಡ್ ಬುಧವಾರ ತನ್ನ ಬ್ಯಾಟಿಂಗ್ ಮುಂದುವರಿಸಿ ಇನ್ನೀಂಗ್ಸ್ ನ ಉಳಿದ 23 ಬಾಲ್ ಆಡಿದ ಬಳಿಕ ಭಾರತ ತನ್ನ ಇನ್ನೀಂಗ್ಸ್ ಆರಂಭಿಸಲಿದೆ. ಬುಧವಾರದ ಪಂದ್ಯದಲ್ಲೂ ಫಲಿತಾಂಶ ಬಾರದಿದ್ದರೆ 10 ತಂಡಗಳಿದ್ದ ಗ್ರೂಪ್ ಹಂತದ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿರುವ ಭಾರತ ಫೈನಲ್‌ಗೆ ತೇರ್ಗಡೆಯಾಗಲಿದೆ.

ಇಲ್ಲಿನ ಎಮಿರೇಟ್ಸ್​​​ ಓಲ್ಡ್​​​​​​​ ಟ್ರಾಫೋರ್ಡ್​ ಕ್ರೀಡಾಂಗಣದಲ್ಲಿ ಟಾಸ್​​ ಗೆದ್ದು ಬ್ಯಾಟಿಂಗ್​ ಮಾಡಿದ ನ್ಯೂಜಿಲೆಂಡ್​​​ 46.1 ಓವರ್​ಗಳಲ್ಲಿ 5 ವಿಕೆಟ್​ ಕಳೆದುಕೊಂಡು 211 ರನ್​ ಗಳಿಸಿ ಬ್ಯಾಟಿಂಗ್​​ ಮಾಡುವ ವೇಳೆ ಮಳೆಯಿಂದ ಪಂದ್ಯ ಸ್ಥಗಿತಗೊಂಡಿತು.
5 ಗಂಟೆಗಳಾದರೂ ಮಳೆ ನಿಲ್ಲದ ಕಾರಣ, ಐಸಿಸಿ ಹಾಗೂ ವಿಶ್ವಕಪ್​​ ಆಡಳಿತ ಮಂಡಳಿ ಬುಧವಾರದ ಮೀಸಲು ದಿನಕ್ಕೆ ಪಂದ್ಯವನ್ನು ಮುಂದೂಡಿದೆ. ಬುಧವಾರ ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 3.00ಕ್ಕೆ ಪಂದ್ಯ ಆರಂಭವಾಗಲಿದೆ. ರಾಸ್​​ ಟೇಲರ್​​​ (67*) ಹಾಗೂ ಟಾಮ್​​ ಲಾಥಮ್​ (3*)ಬ್ಯಾಟಿಂಗ್ ಮುಂದುವರಿಸುವರು.

ಭಾರತದ ಪರ ಜಸ್ಪ್ರೀತ್​ ಬುಮ್ರಾ, ಹಾರ್ದಿಕ್​ ಪಾಂಡ್ಯ, ರವೀಂದ್ರ ಜಡೇಜಾ, ಯಜುವೇಂದ್ರ ಚಾಹಲ್​ ಹಾಗೂ ಭುವನೇಶ್ವರ್​​ ಕುಮಾರ್ ​ತಲಾ ಒಂದು ವಿಕೆಟ್​ ಪಡೆದಿದ್ದಾರೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

5 hours ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

5 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

5 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

6 hours ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

6 hours ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

6 hours ago