Advertisement
ರಾಷ್ಟ್ರೀಯ

ಭಾರತ-ನ್ಯೂಝಿಲ್ಯಾಂಡ್ ಸೆಮಿ ಫೈನಲ್‌ ಪಂದ್ಯ ಇಂದು ಮುಂದುವರಿಯಲಿದೆ

Share

ಮ್ಯಾಂಚೆಸ್ಟರ್:  ಭಾರತ ಹಾಗೂ ನ್ಯೂಝಿಲ್ಯಾಂಡ್ ನಡುವೆ ಮಂಗಳವಾರ ನಡೆದ ಐಸಿಸಿ ಕ್ರಿಕೆಟ್ ವಿಶ್ವಕಪ್ ಸೆಮಿ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ ಪಂದ್ಯವನ್ನು ಮೀಸಲು ದಿನವಾದ ಬುಧವಾರಕ್ಕೆ ಮುಂದೂಡಲಾಗಿದೆ.

ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಾಗ ನ್ಯೂಝಿಲ್ಯಾಂಡ್ 46.1 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 211 ರನ್ ಗಳಿಸಿದೆ. ರಾಸ್ ಟೇಲರ್(ಔಟಾಗದೆ 67, 85 ಎಸೆತ, 3 ಬೌಂಡರಿ, 1 ಸಿಕ್ಸರ್) ಹಾಗೂ ಟಾಮ್ ಲಥಾಮ್(ಔಟಾಗದೆ 3)ಕ್ರೀಸ್ ಕಾಯ್ದುಕೊಂಡಿದ್ದರು. ಕಿವೀಸ್ ಸ್ಪರ್ಧಾತ್ಮಕ ಮೊತ್ತದತ್ತ ಸಾಗುತ್ತಿದ್ದಾಗ ಮಳೆ ಆಗಮಿಸಿ ಪಂದ್ಯ ಸ್ಥಗಿತಗೊಂಡಿದೆ.

ನ್ಯೂಝಿಲ್ಯಾಂಡ್ ಬುಧವಾರ ತನ್ನ ಬ್ಯಾಟಿಂಗ್ ಮುಂದುವರಿಸಿ ಇನ್ನೀಂಗ್ಸ್ ನ ಉಳಿದ 23 ಬಾಲ್ ಆಡಿದ ಬಳಿಕ ಭಾರತ ತನ್ನ ಇನ್ನೀಂಗ್ಸ್ ಆರಂಭಿಸಲಿದೆ. ಬುಧವಾರದ ಪಂದ್ಯದಲ್ಲೂ ಫಲಿತಾಂಶ ಬಾರದಿದ್ದರೆ 10 ತಂಡಗಳಿದ್ದ ಗ್ರೂಪ್ ಹಂತದ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿರುವ ಭಾರತ ಫೈನಲ್‌ಗೆ ತೇರ್ಗಡೆಯಾಗಲಿದೆ.

ಇಲ್ಲಿನ ಎಮಿರೇಟ್ಸ್​​​ ಓಲ್ಡ್​​​​​​​ ಟ್ರಾಫೋರ್ಡ್​ ಕ್ರೀಡಾಂಗಣದಲ್ಲಿ ಟಾಸ್​​ ಗೆದ್ದು ಬ್ಯಾಟಿಂಗ್​ ಮಾಡಿದ ನ್ಯೂಜಿಲೆಂಡ್​​​ 46.1 ಓವರ್​ಗಳಲ್ಲಿ 5 ವಿಕೆಟ್​ ಕಳೆದುಕೊಂಡು 211 ರನ್​ ಗಳಿಸಿ ಬ್ಯಾಟಿಂಗ್​​ ಮಾಡುವ ವೇಳೆ ಮಳೆಯಿಂದ ಪಂದ್ಯ ಸ್ಥಗಿತಗೊಂಡಿತು.
5 ಗಂಟೆಗಳಾದರೂ ಮಳೆ ನಿಲ್ಲದ ಕಾರಣ, ಐಸಿಸಿ ಹಾಗೂ ವಿಶ್ವಕಪ್​​ ಆಡಳಿತ ಮಂಡಳಿ ಬುಧವಾರದ ಮೀಸಲು ದಿನಕ್ಕೆ ಪಂದ್ಯವನ್ನು ಮುಂದೂಡಿದೆ. ಬುಧವಾರ ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 3.00ಕ್ಕೆ ಪಂದ್ಯ ಆರಂಭವಾಗಲಿದೆ. ರಾಸ್​​ ಟೇಲರ್​​​ (67*) ಹಾಗೂ ಟಾಮ್​​ ಲಾಥಮ್​ (3*)ಬ್ಯಾಟಿಂಗ್ ಮುಂದುವರಿಸುವರು.

ಭಾರತದ ಪರ ಜಸ್ಪ್ರೀತ್​ ಬುಮ್ರಾ, ಹಾರ್ದಿಕ್​ ಪಾಂಡ್ಯ, ರವೀಂದ್ರ ಜಡೇಜಾ, ಯಜುವೇಂದ್ರ ಚಾಹಲ್​ ಹಾಗೂ ಭುವನೇಶ್ವರ್​​ ಕುಮಾರ್ ​ತಲಾ ಒಂದು ವಿಕೆಟ್​ ಪಡೆದಿದ್ದಾರೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

24 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago