Advertisement
ರಾಷ್ಟ್ರೀಯ

ಭಾರತ-ನ್ಯೂಝಿಲ್ಯಾಂಡ್ ಸೆಮಿ ಫೈನಲ್‌ ಪಂದ್ಯ ಇಂದು ಮುಂದುವರಿಯಲಿದೆ

Share

ಮ್ಯಾಂಚೆಸ್ಟರ್:  ಭಾರತ ಹಾಗೂ ನ್ಯೂಝಿಲ್ಯಾಂಡ್ ನಡುವೆ ಮಂಗಳವಾರ ನಡೆದ ಐಸಿಸಿ ಕ್ರಿಕೆಟ್ ವಿಶ್ವಕಪ್ ಸೆಮಿ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ ಪಂದ್ಯವನ್ನು ಮೀಸಲು ದಿನವಾದ ಬುಧವಾರಕ್ಕೆ ಮುಂದೂಡಲಾಗಿದೆ.

ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಾಗ ನ್ಯೂಝಿಲ್ಯಾಂಡ್ 46.1 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 211 ರನ್ ಗಳಿಸಿದೆ. ರಾಸ್ ಟೇಲರ್(ಔಟಾಗದೆ 67, 85 ಎಸೆತ, 3 ಬೌಂಡರಿ, 1 ಸಿಕ್ಸರ್) ಹಾಗೂ ಟಾಮ್ ಲಥಾಮ್(ಔಟಾಗದೆ 3)ಕ್ರೀಸ್ ಕಾಯ್ದುಕೊಂಡಿದ್ದರು. ಕಿವೀಸ್ ಸ್ಪರ್ಧಾತ್ಮಕ ಮೊತ್ತದತ್ತ ಸಾಗುತ್ತಿದ್ದಾಗ ಮಳೆ ಆಗಮಿಸಿ ಪಂದ್ಯ ಸ್ಥಗಿತಗೊಂಡಿದೆ.

ನ್ಯೂಝಿಲ್ಯಾಂಡ್ ಬುಧವಾರ ತನ್ನ ಬ್ಯಾಟಿಂಗ್ ಮುಂದುವರಿಸಿ ಇನ್ನೀಂಗ್ಸ್ ನ ಉಳಿದ 23 ಬಾಲ್ ಆಡಿದ ಬಳಿಕ ಭಾರತ ತನ್ನ ಇನ್ನೀಂಗ್ಸ್ ಆರಂಭಿಸಲಿದೆ. ಬುಧವಾರದ ಪಂದ್ಯದಲ್ಲೂ ಫಲಿತಾಂಶ ಬಾರದಿದ್ದರೆ 10 ತಂಡಗಳಿದ್ದ ಗ್ರೂಪ್ ಹಂತದ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿರುವ ಭಾರತ ಫೈನಲ್‌ಗೆ ತೇರ್ಗಡೆಯಾಗಲಿದೆ.

ಇಲ್ಲಿನ ಎಮಿರೇಟ್ಸ್​​​ ಓಲ್ಡ್​​​​​​​ ಟ್ರಾಫೋರ್ಡ್​ ಕ್ರೀಡಾಂಗಣದಲ್ಲಿ ಟಾಸ್​​ ಗೆದ್ದು ಬ್ಯಾಟಿಂಗ್​ ಮಾಡಿದ ನ್ಯೂಜಿಲೆಂಡ್​​​ 46.1 ಓವರ್​ಗಳಲ್ಲಿ 5 ವಿಕೆಟ್​ ಕಳೆದುಕೊಂಡು 211 ರನ್​ ಗಳಿಸಿ ಬ್ಯಾಟಿಂಗ್​​ ಮಾಡುವ ವೇಳೆ ಮಳೆಯಿಂದ ಪಂದ್ಯ ಸ್ಥಗಿತಗೊಂಡಿತು.
5 ಗಂಟೆಗಳಾದರೂ ಮಳೆ ನಿಲ್ಲದ ಕಾರಣ, ಐಸಿಸಿ ಹಾಗೂ ವಿಶ್ವಕಪ್​​ ಆಡಳಿತ ಮಂಡಳಿ ಬುಧವಾರದ ಮೀಸಲು ದಿನಕ್ಕೆ ಪಂದ್ಯವನ್ನು ಮುಂದೂಡಿದೆ. ಬುಧವಾರ ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 3.00ಕ್ಕೆ ಪಂದ್ಯ ಆರಂಭವಾಗಲಿದೆ. ರಾಸ್​​ ಟೇಲರ್​​​ (67*) ಹಾಗೂ ಟಾಮ್​​ ಲಾಥಮ್​ (3*)ಬ್ಯಾಟಿಂಗ್ ಮುಂದುವರಿಸುವರು.

ಭಾರತದ ಪರ ಜಸ್ಪ್ರೀತ್​ ಬುಮ್ರಾ, ಹಾರ್ದಿಕ್​ ಪಾಂಡ್ಯ, ರವೀಂದ್ರ ಜಡೇಜಾ, ಯಜುವೇಂದ್ರ ಚಾಹಲ್​ ಹಾಗೂ ಭುವನೇಶ್ವರ್​​ ಕುಮಾರ್ ​ತಲಾ ಒಂದು ವಿಕೆಟ್​ ಪಡೆದಿದ್ದಾರೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

33 minutes ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

50 minutes ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

19 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago