ಭಾರತ 21 ದಿನ ಲಾಕ್ ಡೌನ್ | ಕೊಯಿ ರೋಡ್ ಪರ್ ನಾ ನಿಕ್ಲೇ – ಪ್ರಧಾನಿ ನರೇಂದ್ರ ಮೋದಿ ಕರೆ

March 24, 2020
8:30 PM

ಕೊರೊನಾ ವೈರಸ್ ವಿರುದ್ಧದ ಸಮರ ಇನ್ನಷ್ಟು ಬಿಗುವಾಗಿದೆ. ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನುದ್ದೇಶಿ ಮಾತನಾಡಿ, ನಮ್ಮ ದೇಶದ ಜನರ ಆರೋಗ್ಯದ ಹಿತದೃಷ್ಟಿಯಿಂದ ಮುಂದಿನ 21 ದಿನಗಳ ಕಾಲ ಭಾರತ ಲಾಕ್ ಡೌನ್ ಆಗಲೇಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಮಂಗಳವಾರ ಮಧ್ಯರಾತ್ರಿಯಿಂದಲೇ ಮನೆಯಲ್ಲೇ ಇರಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

Advertisement
Advertisement

ಕರೋನ ವೈರಸ್ ಅನ್ನು ಈಗ  ಕೊಯಿ ರೋಡ್ ಪರ್ ನಾ ನಿಕ್ಲೇ ಎಂದು ಬದಲಾಯಿಸಿ 21 ದಿನ ಮನೆಯಲ್ಲೇ ಇರಬೇಕು ಎಂದು ಪ್ರಧಾನಿಗಳು ಕರೆ ನೀಡಿದ್ದು ಮನೆಯಲ್ಲೇ ಇರಿ ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರಿ ಎಂದು ಕರೆ ನೀಡಿದ್ದಾರೆ. ಪ್ರಧಾನಿಯಿಂದ ಹಳ್ಳಿಯ ರೈತನವರೆಗೆ ಮನೆಯಲ್ಲೇ ಎಲ್ಲರೂ ಇರಲೇಬೇಕಾದ ಅನಿವಾರ್ಯತೆ ಇದೆ. ಎ.14 ರವರೆಗೆ ಭಾರತ ಲಾಕ್ ಡೌನ್ ಮಾಡಬೇಕಿದೆ. ನಾವು ಬದುಕಲು – ನಮ್ಮ ಕುಟುಂಬ ಬದುಕಲು ಈಗ ಮನೆಯಲ್ಲೇ ಇರುವುದು ಅನಿವಾರ್ಯವಾಗಿದೆ. ಆದರೆ ಅವಶ್ಯ ವಸ್ತುಗಳ ಸರಬರಾಜಿಗೆ ವ್ಯವಸ್ಥೆ ಮಾಡಲಾಗುತ್ತದೆ.

 ಕೊರೊನಾ ತಡೆಗೆ 15 ಸಾವಿರ ಕೋಟಿ ಮೀಸಲಿಡಲಾಗುತ್ತದೆ ಎಂದು ಇದೇ ವೇಳೆ ಭರವಸೆ ನೀಡಿದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ
June 24, 2025
9:02 PM
by: ದ ರೂರಲ್ ಮಿರರ್.ಕಾಂ
ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣ | ಪಶ್ಚಿಮ ಬಂಗಾಳದಲ್ಲಿ ಅಡಿಕೆ ವ್ಯಾಪಾರಿಯ ಬಂಧನ
June 24, 2025
8:41 PM
by: The Rural Mirror ಸುದ್ದಿಜಾಲ
ಪಶು ಆಹಾರ : ಈ ವಿಷಯ ನಿಮಗೆ ತಿಳಿದಿರಲಿ !
June 24, 2025
10:26 AM
by: ದ ರೂರಲ್ ಮಿರರ್.ಕಾಂ
ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ
June 23, 2025
1:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group