ಕೊರೊನಾ ವೈರಸ್ ವಿರುದ್ಧದ ಸಮರ ಇನ್ನಷ್ಟು ಬಿಗುವಾಗಿದೆ. ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನುದ್ದೇಶಿ ಮಾತನಾಡಿ, ನಮ್ಮ ದೇಶದ ಜನರ ಆರೋಗ್ಯದ ಹಿತದೃಷ್ಟಿಯಿಂದ ಮುಂದಿನ 21 ದಿನಗಳ ಕಾಲ ಭಾರತ ಲಾಕ್ ಡೌನ್ ಆಗಲೇಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಮಂಗಳವಾರ ಮಧ್ಯರಾತ್ರಿಯಿಂದಲೇ ಮನೆಯಲ್ಲೇ ಇರಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಕರೋನ ವೈರಸ್ ಅನ್ನು ಈಗ ಕೊಯಿ ರೋಡ್ ಪರ್ ನಾ ನಿಕ್ಲೇ ಎಂದು ಬದಲಾಯಿಸಿ 21 ದಿನ ಮನೆಯಲ್ಲೇ ಇರಬೇಕು ಎಂದು ಪ್ರಧಾನಿಗಳು ಕರೆ ನೀಡಿದ್ದು ಮನೆಯಲ್ಲೇ ಇರಿ ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರಿ ಎಂದು ಕರೆ ನೀಡಿದ್ದಾರೆ. ಪ್ರಧಾನಿಯಿಂದ ಹಳ್ಳಿಯ ರೈತನವರೆಗೆ ಮನೆಯಲ್ಲೇ ಎಲ್ಲರೂ ಇರಲೇಬೇಕಾದ ಅನಿವಾರ್ಯತೆ ಇದೆ. ಎ.14 ರವರೆಗೆ ಭಾರತ ಲಾಕ್ ಡೌನ್ ಮಾಡಬೇಕಿದೆ. ನಾವು ಬದುಕಲು – ನಮ್ಮ ಕುಟುಂಬ ಬದುಕಲು ಈಗ ಮನೆಯಲ್ಲೇ ಇರುವುದು ಅನಿವಾರ್ಯವಾಗಿದೆ. ಆದರೆ ಅವಶ್ಯ ವಸ್ತುಗಳ ಸರಬರಾಜಿಗೆ ವ್ಯವಸ್ಥೆ ಮಾಡಲಾಗುತ್ತದೆ.
ಕೊರೊನಾ ತಡೆಗೆ 15 ಸಾವಿರ ಕೋಟಿ ಮೀಸಲಿಡಲಾಗುತ್ತದೆ ಎಂದು ಇದೇ ವೇಳೆ ಭರವಸೆ ನೀಡಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…