ಕೊರೊನಾ ವೈರಸ್ ವಿರುದ್ಧದ ಸಮರ ಇನ್ನಷ್ಟು ಬಿಗುವಾಗಿದೆ. ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನುದ್ದೇಶಿ ಮಾತನಾಡಿ, ನಮ್ಮ ದೇಶದ ಜನರ ಆರೋಗ್ಯದ ಹಿತದೃಷ್ಟಿಯಿಂದ ಮುಂದಿನ 21 ದಿನಗಳ ಕಾಲ ಭಾರತ ಲಾಕ್ ಡೌನ್ ಆಗಲೇಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಮಂಗಳವಾರ ಮಧ್ಯರಾತ್ರಿಯಿಂದಲೇ ಮನೆಯಲ್ಲೇ ಇರಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಕರೋನ ವೈರಸ್ ಅನ್ನು ಈಗ ಕೊಯಿ ರೋಡ್ ಪರ್ ನಾ ನಿಕ್ಲೇ ಎಂದು ಬದಲಾಯಿಸಿ 21 ದಿನ ಮನೆಯಲ್ಲೇ ಇರಬೇಕು ಎಂದು ಪ್ರಧಾನಿಗಳು ಕರೆ ನೀಡಿದ್ದು ಮನೆಯಲ್ಲೇ ಇರಿ ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರಿ ಎಂದು ಕರೆ ನೀಡಿದ್ದಾರೆ. ಪ್ರಧಾನಿಯಿಂದ ಹಳ್ಳಿಯ ರೈತನವರೆಗೆ ಮನೆಯಲ್ಲೇ ಎಲ್ಲರೂ ಇರಲೇಬೇಕಾದ ಅನಿವಾರ್ಯತೆ ಇದೆ. ಎ.14 ರವರೆಗೆ ಭಾರತ ಲಾಕ್ ಡೌನ್ ಮಾಡಬೇಕಿದೆ. ನಾವು ಬದುಕಲು – ನಮ್ಮ ಕುಟುಂಬ ಬದುಕಲು ಈಗ ಮನೆಯಲ್ಲೇ ಇರುವುದು ಅನಿವಾರ್ಯವಾಗಿದೆ. ಆದರೆ ಅವಶ್ಯ ವಸ್ತುಗಳ ಸರಬರಾಜಿಗೆ ವ್ಯವಸ್ಥೆ ಮಾಡಲಾಗುತ್ತದೆ.
ಕೊರೊನಾ ತಡೆಗೆ 15 ಸಾವಿರ ಕೋಟಿ ಮೀಸಲಿಡಲಾಗುತ್ತದೆ ಎಂದು ಇದೇ ವೇಳೆ ಭರವಸೆ ನೀಡಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…