ಕೊರೊನಾ ವೈರಸ್ ವಿರುದ್ಧದ ಸಮರ ಇನ್ನಷ್ಟು ಬಿಗುವಾಗಿದೆ. ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನುದ್ದೇಶಿ ಮಾತನಾಡಿ, ನಮ್ಮ ದೇಶದ ಜನರ ಆರೋಗ್ಯದ ಹಿತದೃಷ್ಟಿಯಿಂದ ಮುಂದಿನ 21 ದಿನಗಳ ಕಾಲ ಭಾರತ ಲಾಕ್ ಡೌನ್ ಆಗಲೇಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಮಂಗಳವಾರ ಮಧ್ಯರಾತ್ರಿಯಿಂದಲೇ ಮನೆಯಲ್ಲೇ ಇರಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಕರೋನ ವೈರಸ್ ಅನ್ನು ಈಗ ಕೊಯಿ ರೋಡ್ ಪರ್ ನಾ ನಿಕ್ಲೇ ಎಂದು ಬದಲಾಯಿಸಿ 21 ದಿನ ಮನೆಯಲ್ಲೇ ಇರಬೇಕು ಎಂದು ಪ್ರಧಾನಿಗಳು ಕರೆ ನೀಡಿದ್ದು ಮನೆಯಲ್ಲೇ ಇರಿ ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರಿ ಎಂದು ಕರೆ ನೀಡಿದ್ದಾರೆ. ಪ್ರಧಾನಿಯಿಂದ ಹಳ್ಳಿಯ ರೈತನವರೆಗೆ ಮನೆಯಲ್ಲೇ ಎಲ್ಲರೂ ಇರಲೇಬೇಕಾದ ಅನಿವಾರ್ಯತೆ ಇದೆ. ಎ.14 ರವರೆಗೆ ಭಾರತ ಲಾಕ್ ಡೌನ್ ಮಾಡಬೇಕಿದೆ. ನಾವು ಬದುಕಲು – ನಮ್ಮ ಕುಟುಂಬ ಬದುಕಲು ಈಗ ಮನೆಯಲ್ಲೇ ಇರುವುದು ಅನಿವಾರ್ಯವಾಗಿದೆ. ಆದರೆ ಅವಶ್ಯ ವಸ್ತುಗಳ ಸರಬರಾಜಿಗೆ ವ್ಯವಸ್ಥೆ ಮಾಡಲಾಗುತ್ತದೆ.
ಕೊರೊನಾ ತಡೆಗೆ 15 ಸಾವಿರ ಕೋಟಿ ಮೀಸಲಿಡಲಾಗುತ್ತದೆ ಎಂದು ಇದೇ ವೇಳೆ ಭರವಸೆ ನೀಡಿದರು.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…