ಸುಳ್ಯ: ಈಚೆಗೆ ಸುರಿದ ಗಾಳಿ ಮಳೆಗೆ ಗೂನಡ್ಕ ದರ್ಖಾಸು ಪರಿಸರದ ಹತ್ತಾರು ಮನೆಗಳು ಹಾನಿಗೊಂಡಿದ್ದು, ಮನೆಯ ಸುಮಾರು 40ರಷ್ಟು ಮೇಲ್ಛಾವಣಿಗಳು ಹಾರಿ ಹೋಗಿತ್ತು. ಈ ಬಗ್ಗೆ ತಕ್ಷಣ ಸ್ಪಂದಿಸಿದ ಎಸ್.ಎಸ್.ಎಫ್ ಹಾಗೂ ಎಸ್.ವೈ.ಎಸ್ ತುರ್ತು ಸೇವಾ ತಂಡದ ಸದಸ್ಯರು ನೆರವಿನ ಹಸ್ತವನ್ನು ಚಾಚಿ ಮನೆಯನ್ನು ತಕ್ಷಣ ದುರಸ್ತಿ ಮಾಡಿಕೊಟ್ಟಿದ್ದಾರೆ.
ದಾನಿಗಳನ್ನು ಸಂಪರ್ಕಿಸಿ ಬೇಕಾದ ಮೇಲ್ಛಾವಣಿಗಳ ವ್ಯವಸ್ಥೆಯನ್ನು ಮಾಡಿ ರಮ್ಜಾನಿನ ಉಪವಾಸದ ಮಧ್ಯೆಯೂ ಸ್ವತಃ ಕಾರ್ಯಕರ್ತರೇ ಮನೆಗಳನ್ನು ರಿಪೇರಿ ಮಾಡಿಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಅಧ್ಯಕ್ಷರಾದ ಮುಹಮ್ಮದ್ ಕುಂಞಿ ಗೂನಡ್ಕ, ಗೂನಡ್ಕ ಜಮಾಅತ್ ಅಧ್ಯಕ್ಷರಾದ ಉಮರ್ ಹಾಜಿ, ಗ್ರಾಮ ಪಂಚಾಯತ್ ಸದಸ್ಯರಾದ ಪಿ. ಕೆ ಅಬೂಸಾಲಿರವರ ಸಹಿತ ಊರಿನ ಹಿರಿಯರು ಮಾರ್ಗದರ್ಶನವನ್ನು ನೀಡಿ ಸಹಕರಿಸಿದರು.
ಎಸ್.ಎಸ್.ಎಫ್ ಹಾಗೂ ಎಸ್.ವೈ.ಎಸ್ ತುರ್ತು ಸೇವಾ ತಂಡದ ಫೈಝಲ್ ಝುಹ್ರಿ ಕಲ್ಲುಗುಂಡಿ, ಸಿದ್ದೀಖ್ ಗೂನಡ್ಕ, ಹಾರಿಸ್ ಗೂನಡ್ಕ, ಶರೀಫ್ ಜಯನಗರ, ನೌಶಾದ್ ಕೆರೆಮೂಲೆ, ಹಾರಿಸ್ ಬೋರುಗುಡ್ಡೆ, ರಹೀಂ ಪೈಚಾರು ಮುಂತಾದವರು ಹಾಗೂ ಗೂನಡ್ಕ ಜಮಾಅತ್, ಅಲ್ ಅಮೀನ್ ವೆಲ್ಫೇರ್ ಅಸೋಸಿಯೇಷ್, ಎಸ್.ವೈ.ಎಸ್, ಎಸ್ಸೆಸ್ಸೆಫ್ ನಾಯಕರು ಹಾಗೂ ಊರವರು ಈ ದುರಸ್ತಿ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…