ಸುದ್ದಿಗಳು

ಭಾರೀ ಗಾಳಿ ಮಳೆಯಿಂದ ಮನೆಗಳಿಗೆ ಹಾನಿ | ಎಸ್.ಎಸ್ ಎಫ್ ಹಾಗೂ ಎಸ್.ವೈ.ಎಸ್ ನಿಂದ ತುರ್ತು ದುರಸ್ತಿ ಕಾರ್ಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಈಚೆಗೆ ಸುರಿದ  ಗಾಳಿ ಮಳೆಗೆ ಗೂನಡ್ಕ ದರ್ಖಾಸು ಪರಿಸರದ ಹತ್ತಾರು ಮನೆಗಳು ಹಾನಿಗೊಂಡಿದ್ದು, ಮನೆಯ ಸುಮಾರು 40ರಷ್ಟು ಮೇಲ್ಛಾವಣಿಗಳು ಹಾರಿ ಹೋಗಿತ್ತು. ಈ ಬಗ್ಗೆ ತಕ್ಷಣ ಸ್ಪಂದಿಸಿದ ಎಸ್.ಎಸ್.ಎಫ್ ಹಾಗೂ ಎಸ್.ವೈ.ಎಸ್ ತುರ್ತು ಸೇವಾ ತಂಡದ ಸದಸ್ಯರು ನೆರವಿನ ಹಸ್ತವನ್ನು ಚಾಚಿ ಮನೆಯನ್ನು ತಕ್ಷಣ ದುರಸ್ತಿ ಮಾಡಿಕೊಟ್ಟಿದ್ದಾರೆ.

Advertisement
Advertisement

ದಾನಿಗಳನ್ನು ಸಂಪರ್ಕಿಸಿ ಬೇಕಾದ ಮೇಲ್ಛಾವಣಿಗಳ ವ್ಯವಸ್ಥೆಯನ್ನು ಮಾಡಿ ರಮ್ಜಾನಿನ ಉಪವಾಸದ ಮಧ್ಯೆಯೂ ಸ್ವತಃ ಕಾರ್ಯಕರ್ತರೇ  ಮನೆಗಳನ್ನು ರಿಪೇರಿ ಮಾಡಿಕೊಟ್ಟಿದ್ದಾರೆ.  ಈ ಸಂದರ್ಭದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಅಧ್ಯಕ್ಷರಾದ ಮುಹಮ್ಮದ್ ಕುಂಞಿ ಗೂನಡ್ಕ, ಗೂನಡ್ಕ ಜಮಾಅತ್ ಅಧ್ಯಕ್ಷರಾದ ಉಮರ್ ಹಾಜಿ, ಗ್ರಾಮ ಪಂಚಾಯತ್ ಸದಸ್ಯರಾದ ಪಿ. ಕೆ ಅಬೂಸಾಲಿರವರ ಸಹಿತ ಊರಿನ ಹಿರಿಯರು ಮಾರ್ಗದರ್ಶನವನ್ನು ನೀಡಿ ಸಹಕರಿಸಿದರು.

ಎಸ್.ಎಸ್.ಎಫ್ ಹಾಗೂ ಎಸ್.ವೈ.ಎಸ್ ತುರ್ತು ಸೇವಾ ತಂಡದ ಫೈಝಲ್ ಝುಹ್ರಿ ಕಲ್ಲುಗುಂಡಿ, ಸಿದ್ದೀಖ್ ಗೂನಡ್ಕ, ಹಾರಿಸ್ ಗೂನಡ್ಕ, ಶರೀಫ್ ಜಯನಗರ, ನೌಶಾದ್ ಕೆರೆಮೂಲೆ, ಹಾರಿಸ್ ಬೋರುಗುಡ್ಡೆ, ರಹೀಂ ಪೈಚಾರು ಮುಂತಾದವರು ಹಾಗೂ ಗೂನಡ್ಕ ಜಮಾಅತ್, ಅಲ್ ಅಮೀನ್ ವೆಲ್ಫೇರ್ ಅಸೋಸಿಯೇಷ್, ಎಸ್.ವೈ.ಎಸ್, ಎಸ್ಸೆಸ್ಸೆಫ್ ನಾಯಕರು ಹಾಗೂ ಊರವರು ಈ ದುರಸ್ತಿ ಕಾರ್ಯದಲ್ಲಿ  ಪಾಲ್ಗೊಂಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

43 minutes ago

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

10 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

10 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

10 hours ago

ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ  ಭಾರಿ ಮಳೆ ಮತ್ತು ಗುಡುಗು ಸಹಿತ…

11 hours ago

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…

11 hours ago