ಸುಳ್ಯ: ಈಚೆಗೆ ಸುರಿದ ಗಾಳಿ ಮಳೆಗೆ ಗೂನಡ್ಕ ದರ್ಖಾಸು ಪರಿಸರದ ಹತ್ತಾರು ಮನೆಗಳು ಹಾನಿಗೊಂಡಿದ್ದು, ಮನೆಯ ಸುಮಾರು 40ರಷ್ಟು ಮೇಲ್ಛಾವಣಿಗಳು ಹಾರಿ ಹೋಗಿತ್ತು. ಈ ಬಗ್ಗೆ ತಕ್ಷಣ ಸ್ಪಂದಿಸಿದ ಎಸ್.ಎಸ್.ಎಫ್ ಹಾಗೂ ಎಸ್.ವೈ.ಎಸ್ ತುರ್ತು ಸೇವಾ ತಂಡದ ಸದಸ್ಯರು ನೆರವಿನ ಹಸ್ತವನ್ನು ಚಾಚಿ ಮನೆಯನ್ನು ತಕ್ಷಣ ದುರಸ್ತಿ ಮಾಡಿಕೊಟ್ಟಿದ್ದಾರೆ.
ದಾನಿಗಳನ್ನು ಸಂಪರ್ಕಿಸಿ ಬೇಕಾದ ಮೇಲ್ಛಾವಣಿಗಳ ವ್ಯವಸ್ಥೆಯನ್ನು ಮಾಡಿ ರಮ್ಜಾನಿನ ಉಪವಾಸದ ಮಧ್ಯೆಯೂ ಸ್ವತಃ ಕಾರ್ಯಕರ್ತರೇ ಮನೆಗಳನ್ನು ರಿಪೇರಿ ಮಾಡಿಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಅಧ್ಯಕ್ಷರಾದ ಮುಹಮ್ಮದ್ ಕುಂಞಿ ಗೂನಡ್ಕ, ಗೂನಡ್ಕ ಜಮಾಅತ್ ಅಧ್ಯಕ್ಷರಾದ ಉಮರ್ ಹಾಜಿ, ಗ್ರಾಮ ಪಂಚಾಯತ್ ಸದಸ್ಯರಾದ ಪಿ. ಕೆ ಅಬೂಸಾಲಿರವರ ಸಹಿತ ಊರಿನ ಹಿರಿಯರು ಮಾರ್ಗದರ್ಶನವನ್ನು ನೀಡಿ ಸಹಕರಿಸಿದರು.
ಎಸ್.ಎಸ್.ಎಫ್ ಹಾಗೂ ಎಸ್.ವೈ.ಎಸ್ ತುರ್ತು ಸೇವಾ ತಂಡದ ಫೈಝಲ್ ಝುಹ್ರಿ ಕಲ್ಲುಗುಂಡಿ, ಸಿದ್ದೀಖ್ ಗೂನಡ್ಕ, ಹಾರಿಸ್ ಗೂನಡ್ಕ, ಶರೀಫ್ ಜಯನಗರ, ನೌಶಾದ್ ಕೆರೆಮೂಲೆ, ಹಾರಿಸ್ ಬೋರುಗುಡ್ಡೆ, ರಹೀಂ ಪೈಚಾರು ಮುಂತಾದವರು ಹಾಗೂ ಗೂನಡ್ಕ ಜಮಾಅತ್, ಅಲ್ ಅಮೀನ್ ವೆಲ್ಫೇರ್ ಅಸೋಸಿಯೇಷ್, ಎಸ್.ವೈ.ಎಸ್, ಎಸ್ಸೆಸ್ಸೆಫ್ ನಾಯಕರು ಹಾಗೂ ಊರವರು ಈ ದುರಸ್ತಿ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…