ಸುಳ್ಯ: ಈಚೆಗೆ ಸುರಿದ ಗಾಳಿ ಮಳೆಗೆ ಗೂನಡ್ಕ ದರ್ಖಾಸು ಪರಿಸರದ ಹತ್ತಾರು ಮನೆಗಳು ಹಾನಿಗೊಂಡಿದ್ದು, ಮನೆಯ ಸುಮಾರು 40ರಷ್ಟು ಮೇಲ್ಛಾವಣಿಗಳು ಹಾರಿ ಹೋಗಿತ್ತು. ಈ ಬಗ್ಗೆ ತಕ್ಷಣ ಸ್ಪಂದಿಸಿದ ಎಸ್.ಎಸ್.ಎಫ್ ಹಾಗೂ ಎಸ್.ವೈ.ಎಸ್ ತುರ್ತು ಸೇವಾ ತಂಡದ ಸದಸ್ಯರು ನೆರವಿನ ಹಸ್ತವನ್ನು ಚಾಚಿ ಮನೆಯನ್ನು ತಕ್ಷಣ ದುರಸ್ತಿ ಮಾಡಿಕೊಟ್ಟಿದ್ದಾರೆ.
ದಾನಿಗಳನ್ನು ಸಂಪರ್ಕಿಸಿ ಬೇಕಾದ ಮೇಲ್ಛಾವಣಿಗಳ ವ್ಯವಸ್ಥೆಯನ್ನು ಮಾಡಿ ರಮ್ಜಾನಿನ ಉಪವಾಸದ ಮಧ್ಯೆಯೂ ಸ್ವತಃ ಕಾರ್ಯಕರ್ತರೇ ಮನೆಗಳನ್ನು ರಿಪೇರಿ ಮಾಡಿಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಅಧ್ಯಕ್ಷರಾದ ಮುಹಮ್ಮದ್ ಕುಂಞಿ ಗೂನಡ್ಕ, ಗೂನಡ್ಕ ಜಮಾಅತ್ ಅಧ್ಯಕ್ಷರಾದ ಉಮರ್ ಹಾಜಿ, ಗ್ರಾಮ ಪಂಚಾಯತ್ ಸದಸ್ಯರಾದ ಪಿ. ಕೆ ಅಬೂಸಾಲಿರವರ ಸಹಿತ ಊರಿನ ಹಿರಿಯರು ಮಾರ್ಗದರ್ಶನವನ್ನು ನೀಡಿ ಸಹಕರಿಸಿದರು.
ಎಸ್.ಎಸ್.ಎಫ್ ಹಾಗೂ ಎಸ್.ವೈ.ಎಸ್ ತುರ್ತು ಸೇವಾ ತಂಡದ ಫೈಝಲ್ ಝುಹ್ರಿ ಕಲ್ಲುಗುಂಡಿ, ಸಿದ್ದೀಖ್ ಗೂನಡ್ಕ, ಹಾರಿಸ್ ಗೂನಡ್ಕ, ಶರೀಫ್ ಜಯನಗರ, ನೌಶಾದ್ ಕೆರೆಮೂಲೆ, ಹಾರಿಸ್ ಬೋರುಗುಡ್ಡೆ, ರಹೀಂ ಪೈಚಾರು ಮುಂತಾದವರು ಹಾಗೂ ಗೂನಡ್ಕ ಜಮಾಅತ್, ಅಲ್ ಅಮೀನ್ ವೆಲ್ಫೇರ್ ಅಸೋಸಿಯೇಷ್, ಎಸ್.ವೈ.ಎಸ್, ಎಸ್ಸೆಸ್ಸೆಫ್ ನಾಯಕರು ಹಾಗೂ ಊರವರು ಈ ದುರಸ್ತಿ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…