ಬಳ್ಪ: ಬುಧವಾರ ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಸುಬ್ರಹ್ಮಣ್ಯ – ಪಂಜ ರಸ್ತೆಯ ಬಳ್ಪ ಬಳಿಯ ಎಣ್ಣೆಮಜಲು ಕ್ರಾಸ್ ಬಳಿ ಚಲಿಸುತ್ತಿದ್ದ ಸ್ಕೂಟರ್ ಹಾಗೂ ಕಾರಿನ ಮೇಲೆ ಮರ ಬಿದ್ದು ಕಾರು ಚಾಲಕ ಗಣೇಶ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬುಧವಾರ ಸಂಜೆ ಭಾರೀ ಗುಡುಗು ಸಹಿತ ಮಳೆಯಾಗಿದೆ. ಸುಮಾರು 6 ಗಂಟೆಯಿಂದ ಆರಂಭವಾದ ಭಾರಿ ಸಿಡಿಲು,ಗುಡುಗು,ಗಾಳಿ ಸಹಿತವಾದ ಮಳೆ ಬಳ್ಪ, ಗುತ್ತಿಗಾರು, ಏನೇಕಲ್ಲು ಆಸುಪಾಸಿನಲ್ಲಿ ಆರಂಭವಾಗಿತ್ತು. ಈ ಸಂದರ್ಭ ಎಣ್ಣೆಮಜಲು ಕ್ರಾಸ್ ಬಳಿ ಸುಬ್ರಹ್ಮಣ್ಯ ಕಡೆಗೆ ಸಂಚರಿಸುತ್ತಿದ್ದ ಬಡೆಕ್ಕೋಡಿಯ ಜನಾರ್ಧನ ಎಂಬವರ ಕಾರಿನ ಮೇಲೆ ಹಾಗೂ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸ್ಕೂಟರ್ ಮೇಲೆ ಮರ ಉರುಳಿ ಬಿದ್ದಿದೆ. ಈ ಸಂದರ್ಭ ಕಾರು ಚಲಾಯಿಸುತ್ತಿದ್ದ ಗಣೇಶ್ ಎಂಬವರು ಗಂಭೀರ ಗಾಯಗೊಂಡರು. ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿದೆ.
ಬಡೆಕ್ಕೋಡಿಯಿಂದ ಸುಬ್ರಹ್ಮಣ್ಯದ ಬಳಿಯ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಜನಾರ್ಧನ ಅವರ ಕಾರನ್ನು ಗಣೇಶ್ ಅವರು ಚಲಾಯಿಸಿಕೊಂಡು ಹೋಗುತ್ತಿದ್ದರು.
ಸುಗಮ ವಾಹನ ಸಂಚಾರಕ್ಕೆ ಅರಣ್ಯ ಇಲಾಖಾ ಸಿಬಂದಿಗಳು ವ್ಯವಸ್ಥೆ ಮಾಡಿದರು.
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…
ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…
ಬಾಲ್ಯದಲ್ಲಿ ಕಠೋರನಂತೆ ಕಾಣುವ ಅಪ್ಪನ ನಿಜವಾದ ಪ್ರೀತಿ ಮತ್ತು ತ್ಯಾಗ ನಮ್ಮ ಬದುಕಿನ…