ಬಳ್ಪ: ಬುಧವಾರ ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಸುಬ್ರಹ್ಮಣ್ಯ – ಪಂಜ ರಸ್ತೆಯ ಬಳ್ಪ ಬಳಿಯ ಎಣ್ಣೆಮಜಲು ಕ್ರಾಸ್ ಬಳಿ ಚಲಿಸುತ್ತಿದ್ದ ಸ್ಕೂಟರ್ ಹಾಗೂ ಕಾರಿನ ಮೇಲೆ ಮರ ಬಿದ್ದು ಕಾರು ಚಾಲಕ ಗಣೇಶ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬುಧವಾರ ಸಂಜೆ ಭಾರೀ ಗುಡುಗು ಸಹಿತ ಮಳೆಯಾಗಿದೆ. ಸುಮಾರು 6 ಗಂಟೆಯಿಂದ ಆರಂಭವಾದ ಭಾರಿ ಸಿಡಿಲು,ಗುಡುಗು,ಗಾಳಿ ಸಹಿತವಾದ ಮಳೆ ಬಳ್ಪ, ಗುತ್ತಿಗಾರು, ಏನೇಕಲ್ಲು ಆಸುಪಾಸಿನಲ್ಲಿ ಆರಂಭವಾಗಿತ್ತು. ಈ ಸಂದರ್ಭ ಎಣ್ಣೆಮಜಲು ಕ್ರಾಸ್ ಬಳಿ ಸುಬ್ರಹ್ಮಣ್ಯ ಕಡೆಗೆ ಸಂಚರಿಸುತ್ತಿದ್ದ ಬಡೆಕ್ಕೋಡಿಯ ಜನಾರ್ಧನ ಎಂಬವರ ಕಾರಿನ ಮೇಲೆ ಹಾಗೂ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸ್ಕೂಟರ್ ಮೇಲೆ ಮರ ಉರುಳಿ ಬಿದ್ದಿದೆ. ಈ ಸಂದರ್ಭ ಕಾರು ಚಲಾಯಿಸುತ್ತಿದ್ದ ಗಣೇಶ್ ಎಂಬವರು ಗಂಭೀರ ಗಾಯಗೊಂಡರು. ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿದೆ.
ಬಡೆಕ್ಕೋಡಿಯಿಂದ ಸುಬ್ರಹ್ಮಣ್ಯದ ಬಳಿಯ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಜನಾರ್ಧನ ಅವರ ಕಾರನ್ನು ಗಣೇಶ್ ಅವರು ಚಲಾಯಿಸಿಕೊಂಡು ಹೋಗುತ್ತಿದ್ದರು.
ಸುಗಮ ವಾಹನ ಸಂಚಾರಕ್ಕೆ ಅರಣ್ಯ ಇಲಾಖಾ ಸಿಬಂದಿಗಳು ವ್ಯವಸ್ಥೆ ಮಾಡಿದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…