ಬಳ್ಪ: ಬುಧವಾರ ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಸುಬ್ರಹ್ಮಣ್ಯ – ಪಂಜ ರಸ್ತೆಯ ಬಳ್ಪ ಬಳಿಯ ಎಣ್ಣೆಮಜಲು ಕ್ರಾಸ್ ಬಳಿ ಚಲಿಸುತ್ತಿದ್ದ ಸ್ಕೂಟರ್ ಹಾಗೂ ಕಾರಿನ ಮೇಲೆ ಮರ ಬಿದ್ದು ಕಾರು ಚಾಲಕ ಗಣೇಶ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬುಧವಾರ ಸಂಜೆ ಭಾರೀ ಗುಡುಗು ಸಹಿತ ಮಳೆಯಾಗಿದೆ. ಸುಮಾರು 6 ಗಂಟೆಯಿಂದ ಆರಂಭವಾದ ಭಾರಿ ಸಿಡಿಲು,ಗುಡುಗು,ಗಾಳಿ ಸಹಿತವಾದ ಮಳೆ ಬಳ್ಪ, ಗುತ್ತಿಗಾರು, ಏನೇಕಲ್ಲು ಆಸುಪಾಸಿನಲ್ಲಿ ಆರಂಭವಾಗಿತ್ತು. ಈ ಸಂದರ್ಭ ಎಣ್ಣೆಮಜಲು ಕ್ರಾಸ್ ಬಳಿ ಸುಬ್ರಹ್ಮಣ್ಯ ಕಡೆಗೆ ಸಂಚರಿಸುತ್ತಿದ್ದ ಬಡೆಕ್ಕೋಡಿಯ ಜನಾರ್ಧನ ಎಂಬವರ ಕಾರಿನ ಮೇಲೆ ಹಾಗೂ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸ್ಕೂಟರ್ ಮೇಲೆ ಮರ ಉರುಳಿ ಬಿದ್ದಿದೆ. ಈ ಸಂದರ್ಭ ಕಾರು ಚಲಾಯಿಸುತ್ತಿದ್ದ ಗಣೇಶ್ ಎಂಬವರು ಗಂಭೀರ ಗಾಯಗೊಂಡರು. ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿದೆ.
ಬಡೆಕ್ಕೋಡಿಯಿಂದ ಸುಬ್ರಹ್ಮಣ್ಯದ ಬಳಿಯ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಜನಾರ್ಧನ ಅವರ ಕಾರನ್ನು ಗಣೇಶ್ ಅವರು ಚಲಾಯಿಸಿಕೊಂಡು ಹೋಗುತ್ತಿದ್ದರು.
ಸುಗಮ ವಾಹನ ಸಂಚಾರಕ್ಕೆ ಅರಣ್ಯ ಇಲಾಖಾ ಸಿಬಂದಿಗಳು ವ್ಯವಸ್ಥೆ ಮಾಡಿದರು.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…