ಬಳ್ಪ: ಬುಧವಾರ ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಸುಬ್ರಹ್ಮಣ್ಯ – ಪಂಜ ರಸ್ತೆಯ ಬಳ್ಪ ಬಳಿಯ ಎಣ್ಣೆಮಜಲು ಕ್ರಾಸ್ ಬಳಿ ಚಲಿಸುತ್ತಿದ್ದ ಸ್ಕೂಟರ್ ಹಾಗೂ ಕಾರಿನ ಮೇಲೆ ಮರ ಬಿದ್ದು ಕಾರು ಚಾಲಕ ಗಣೇಶ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬುಧವಾರ ಸಂಜೆ ಭಾರೀ ಗುಡುಗು ಸಹಿತ ಮಳೆಯಾಗಿದೆ. ಸುಮಾರು 6 ಗಂಟೆಯಿಂದ ಆರಂಭವಾದ ಭಾರಿ ಸಿಡಿಲು,ಗುಡುಗು,ಗಾಳಿ ಸಹಿತವಾದ ಮಳೆ ಬಳ್ಪ, ಗುತ್ತಿಗಾರು, ಏನೇಕಲ್ಲು ಆಸುಪಾಸಿನಲ್ಲಿ ಆರಂಭವಾಗಿತ್ತು. ಈ ಸಂದರ್ಭ ಎಣ್ಣೆಮಜಲು ಕ್ರಾಸ್ ಬಳಿ ಸುಬ್ರಹ್ಮಣ್ಯ ಕಡೆಗೆ ಸಂಚರಿಸುತ್ತಿದ್ದ ಬಡೆಕ್ಕೋಡಿಯ ಜನಾರ್ಧನ ಎಂಬವರ ಕಾರಿನ ಮೇಲೆ ಹಾಗೂ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸ್ಕೂಟರ್ ಮೇಲೆ ಮರ ಉರುಳಿ ಬಿದ್ದಿದೆ. ಈ ಸಂದರ್ಭ ಕಾರು ಚಲಾಯಿಸುತ್ತಿದ್ದ ಗಣೇಶ್ ಎಂಬವರು ಗಂಭೀರ ಗಾಯಗೊಂಡರು. ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿದೆ.
ಬಡೆಕ್ಕೋಡಿಯಿಂದ ಸುಬ್ರಹ್ಮಣ್ಯದ ಬಳಿಯ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಜನಾರ್ಧನ ಅವರ ಕಾರನ್ನು ಗಣೇಶ್ ಅವರು ಚಲಾಯಿಸಿಕೊಂಡು ಹೋಗುತ್ತಿದ್ದರು.
ಸುಗಮ ವಾಹನ ಸಂಚಾರಕ್ಕೆ ಅರಣ್ಯ ಇಲಾಖಾ ಸಿಬಂದಿಗಳು ವ್ಯವಸ್ಥೆ ಮಾಡಿದರು.
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…