ಬಳ್ಪ: ಬುಧವಾರ ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಸುಬ್ರಹ್ಮಣ್ಯ – ಪಂಜ ರಸ್ತೆಯ ಬಳ್ಪ ಬಳಿಯ ಎಣ್ಣೆಮಜಲು ಕ್ರಾಸ್ ಬಳಿ ಚಲಿಸುತ್ತಿದ್ದ ಸ್ಕೂಟರ್ ಹಾಗೂ ಕಾರಿನ ಮೇಲೆ ಮರ ಬಿದ್ದು ಕಾರು ಚಾಲಕ ಗಣೇಶ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬುಧವಾರ ಸಂಜೆ ಭಾರೀ ಗುಡುಗು ಸಹಿತ ಮಳೆಯಾಗಿದೆ. ಸುಮಾರು 6 ಗಂಟೆಯಿಂದ ಆರಂಭವಾದ ಭಾರಿ ಸಿಡಿಲು,ಗುಡುಗು,ಗಾಳಿ ಸಹಿತವಾದ ಮಳೆ ಬಳ್ಪ, ಗುತ್ತಿಗಾರು, ಏನೇಕಲ್ಲು ಆಸುಪಾಸಿನಲ್ಲಿ ಆರಂಭವಾಗಿತ್ತು. ಈ ಸಂದರ್ಭ ಎಣ್ಣೆಮಜಲು ಕ್ರಾಸ್ ಬಳಿ ಸುಬ್ರಹ್ಮಣ್ಯ ಕಡೆಗೆ ಸಂಚರಿಸುತ್ತಿದ್ದ ಬಡೆಕ್ಕೋಡಿಯ ಜನಾರ್ಧನ ಎಂಬವರ ಕಾರಿನ ಮೇಲೆ ಹಾಗೂ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸ್ಕೂಟರ್ ಮೇಲೆ ಮರ ಉರುಳಿ ಬಿದ್ದಿದೆ. ಈ ಸಂದರ್ಭ ಕಾರು ಚಲಾಯಿಸುತ್ತಿದ್ದ ಗಣೇಶ್ ಎಂಬವರು ಗಂಭೀರ ಗಾಯಗೊಂಡರು. ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿದೆ.
ಬಡೆಕ್ಕೋಡಿಯಿಂದ ಸುಬ್ರಹ್ಮಣ್ಯದ ಬಳಿಯ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಜನಾರ್ಧನ ಅವರ ಕಾರನ್ನು ಗಣೇಶ್ ಅವರು ಚಲಾಯಿಸಿಕೊಂಡು ಹೋಗುತ್ತಿದ್ದರು.
ಸುಗಮ ವಾಹನ ಸಂಚಾರಕ್ಕೆ ಅರಣ್ಯ ಇಲಾಖಾ ಸಿಬಂದಿಗಳು ವ್ಯವಸ್ಥೆ ಮಾಡಿದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…