ಮಂಗಳೂರು/ಸುಳ್ಯ: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಮುಂದಿನ 48 ಗಂಟೆಗಳಲ್ಲಿ ಮತ್ತೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಸರ್ವ ಸನ್ನದ್ಧವಾಗಿರಬೇಕು ಎಂದು ಸೂಚನೆ ನೀಡಿದೆ. ಇಲಾಖೆ ಮಾತ್ರವಲ್ಲ ಸಾರ್ವಜನಿಕರದ್ದೂ ಇಲ್ಲಿ ಮುಂಜಾಗ್ರತೆಯ ಬಹುಪಾಲು ಜವಾಬ್ದಾರಿ ಇದೆ.
ಜಿಲ್ಲೆಯ ಪದವಿಯವರೆಗಿನ ಎಲ್ಲಾ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ನೀಡುವುದು , ನೀರು ಅಥವಾ ತಗ್ಗು ಪ್ರದೇಶಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರಿಕೆ ವಹಿಸುವುದು, ಮೀನುಗಾರರು 3 ದಿನಗಳ ಕಾಲ ಕಡ್ಡಾಯವಾಗಿ ಸಮುದ್ರಕ್ಕೆ ಇಳಿಯುವುದು ನಿಷೇಧ, ಸಾರ್ವಜನಿಕ ದೂರುಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸುವುದು , ಪ್ರವಾಸಿಗರು ಹಾಗೂ ಸಾರ್ವಜನಿಕರು ನೀರಿಗೆ ಇಳಿಯದಂತೆ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ.
ಯಾವುದಾದರೂ ಪ್ರಾಕೃತಿಕ ವಿಕೋಪ ಸಂಭವಿಸಿದಾಗ ತುರ್ತು ಸಂಪರ್ಕ ಸಂಖ್ಯೆಗೆ ಸಂಪರ್ಕಿಸಲು ಇದೇ ವೇಳೆ ಕೋರಲಾಗಿದೆ. 24 ಗಂಟೆಯೂ ಚಾಲೂ ಇರುವ ಕಂಟ್ರೋಲ್ ರೂಂ 1077 ಗೆ ಕರೆ ಮಾಡಬಹುದು.
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…
ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…
ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…
ಹೆಚ್ಚಿನ ಪಾಲಕರು(Parents) ಮಕ್ಕಳನ್ನು(Children) ಹೆತ್ತ ನಂತರ ಅವರನ್ನು ಶಿಕ್ಷಣದ ವ್ಯವಸ್ಥೆ(Education system) ಮಾಡುವುದು…
ಅಮೇಥಿ(Amethi) ಮತ್ತು ರಾಯ್ ಬರೇಲಿ(Raebareli) ಉತ್ತರ ಪ್ರದೇಶದ(Uttar Pradesh) ಈ ಎರಡು ಕ್ಷೇತ್ರಗಳು…
ಬಿಸಿಲಿನ ಪರಿಣಾಮ ತರಕಾರಿ ಧಾರಣೆ ಏರಿಕೆಯ ಹಾದಿಯಲ್ಲಿದೆ.