ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ 20.07.2019 ರಂದು ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ.
ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ ಅಲ್ಲದೆ ಮುಂಗಾರು ಮಳೆ ಮತ್ತಷ್ಟು ಬಿರುಸಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ.
ದಿನಾಂಕ 20.07.2019 ರಿಂದ 22.07.2019 ರವರೆಗೆ ಜಿಲ್ಲೆಯಲ್ಲಿ ಪ್ರತಿದಿನ 200 ಮಿಲಿಮೀಟರ್ ಮಳೆ ಬೀಳುವ ಸಾಧ್ಯತೆ ಇದ್ದು, ಕೇಂದ್ರ ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ದಿನಾಂಕ 20 ರಿಂದ 22 ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದ್ದು, ನೀರು ತುಂಬುವ ತಗ್ಗು ಪ್ರದೇಶ, ಕೆರೆ, ಸಮುದ್ರಕ್ಕೆ ಸಾರ್ವಜನಿಕರು ತೆರಳದಂತೆ ಎಚ್ಚರಿಕೆ ನೀಡಲಾಗಿದೆ.
ನಮಗೆ ಸಂಬಂಧಿಸಿದ್ದ ಅಲ್ಲ, ಕಾನೂನು ಇದೆ, ಇಲಾಖೆಗಳು ಇವೆ, ತನಿಖೆಯಾಗುತ್ತಿದೆ. ಹೀಗಾಗಿ ಮಾತನಾಡಬಾರದು,…
ನರೇಗಾ ಸೇರಿದಂತೆ ಇತರೆ ಗ್ರಾಮೀಣ ಕೆಲಸಗಳಲ್ಲಿ ದುಡಿಯುವ ಮಹಿಳೆಯರ ನೆರವಿಗೆ ಬಂದಿರುವ ರಾಜ್ಯ…
ಕಳೆದ 11 ವರ್ಷಗಳಲ್ಲಿ ಎನ್ ಡಿಎ ಸರ್ಕಾರ ರೈತರ ಆದಾಯ ದ್ವಿಗುಣ ಮತ್ತು…
ಕೃಷಿ ಬದುಕಿನ ಮಹಿಳೆಯೊಬ್ಬರು ತನ್ನದೇ ಕೃಷಿ ಚಟುವಟಿಕೆಯಲ್ಲಿ ಯಾವುದೇ ಸಂಕೋಚ ತೋರದೆ, ಅಡಿಕೆ…
ಮಂಗಳವಾರ ಉತ್ತರಾಖಂಡದ ಗುಡ್ಡಗಾಡು ರಾಜ್ಯದ ಧರಾಲಿ ಜಿಲ್ಲೆಯಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದೆ. ಖೀರ್…
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ…