ಸುಬ್ರಹ್ಮಣ್ಯ:ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮಂಗಳೂರು-ಬೆಂಗಳೂರು ರೈಲು ಹಳಿಗೆ ಸಿರಿಬಾಗಿಲು ಹಾಗೂ ಇತರ 4 ಕಡೆ ಹಳಿಗೆ ಮಣ್ಣು ಕುಸಿದ ಪರಿಣಾಮ ರೈಲು ಸಂಚಾರ ಸ್ಥಗಿತಗೊಂಡಿದೆ. ಇಂದು ಬೆಳಗ್ಗೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಿಂದ ಸಕಲೇಶಪುರ ನಡುವಣ ರೈಲು ಹಳಿಯಲ್ಲಿ ಮಣ್ಣು ಕುಸಿತದ ಪರಿಣಾಮ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.
ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಿಂದ ಸಕಲೇಶಪುರ ನಡುವಣ ರೈಲು ಹಳಿಯ 86 ನೇ ಕಿಮೀ ಹಾಗೂ 83 ಹಾಗೂ ಇತರ ಎರಡು ಕಡೆ ಸೇರಿದಂತೆ 4 ಕಡೆಗಳಲ್ಲಿ ಕುಸಿತವಾಗಿದೆ. ಈವರೆಗೆ 86 ನೇ ಕಿಮೀ ಪ್ರದೇಶದ ಮಣ್ಣು ತೆರವು ಕಾರ್ಯ ಪೂರ್ತಿಗೊಂಡಿಲ್ಲ. ತುರ್ತು ಕಾರ್ಯದ ಹಿನ್ನೆಲೆಯಲ್ಲಿ 50 ಕ್ಕೂ ಅಧಿಕ ಕಾರ್ಮಿಕರು ಹಾಗೂ ಯಂತ್ರದ ಮೂಲಕ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಈಗಲೂ ಮಳೆ ಸುರಿಯುತ್ತಿರುವ ಕಾರಣ ಕೆಲಸದ ಪ್ರಗತಿಗೆ ಅಡ್ಡಿಯಾಗಿದೆ. ಮಧ್ಯಾಹ್ನದ ಎರಡೂ ರೈಲುಗಳ ಓಡಾಟ ಸ್ಥಗಿತವಾಗಿತ್ತು. ಇದೀಗ ರಾತ್ರಿ ರೈಲು ಕೂಟಾ ಸ್ಥಗಿತಗೊಳ್ಳುವ ಸೂಚನೆ ಇದೆ.
ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…
ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…