ಸುಬ್ರಹ್ಮಣ್ಯ:ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮಂಗಳೂರು-ಬೆಂಗಳೂರು ರೈಲು ಹಳಿಗೆ ಸಿರಿಬಾಗಿಲು ಹಾಗೂ ಇತರ 4 ಕಡೆ ಹಳಿಗೆ ಮಣ್ಣು ಕುಸಿದ ಪರಿಣಾಮ ರೈಲು ಸಂಚಾರ ಸ್ಥಗಿತಗೊಂಡಿದೆ. ಇಂದು ಬೆಳಗ್ಗೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಿಂದ ಸಕಲೇಶಪುರ ನಡುವಣ ರೈಲು ಹಳಿಯಲ್ಲಿ ಮಣ್ಣು ಕುಸಿತದ ಪರಿಣಾಮ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.
ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಿಂದ ಸಕಲೇಶಪುರ ನಡುವಣ ರೈಲು ಹಳಿಯ 86 ನೇ ಕಿಮೀ ಹಾಗೂ 83 ಹಾಗೂ ಇತರ ಎರಡು ಕಡೆ ಸೇರಿದಂತೆ 4 ಕಡೆಗಳಲ್ಲಿ ಕುಸಿತವಾಗಿದೆ. ಈವರೆಗೆ 86 ನೇ ಕಿಮೀ ಪ್ರದೇಶದ ಮಣ್ಣು ತೆರವು ಕಾರ್ಯ ಪೂರ್ತಿಗೊಂಡಿಲ್ಲ. ತುರ್ತು ಕಾರ್ಯದ ಹಿನ್ನೆಲೆಯಲ್ಲಿ 50 ಕ್ಕೂ ಅಧಿಕ ಕಾರ್ಮಿಕರು ಹಾಗೂ ಯಂತ್ರದ ಮೂಲಕ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಈಗಲೂ ಮಳೆ ಸುರಿಯುತ್ತಿರುವ ಕಾರಣ ಕೆಲಸದ ಪ್ರಗತಿಗೆ ಅಡ್ಡಿಯಾಗಿದೆ. ಮಧ್ಯಾಹ್ನದ ಎರಡೂ ರೈಲುಗಳ ಓಡಾಟ ಸ್ಥಗಿತವಾಗಿತ್ತು. ಇದೀಗ ರಾತ್ರಿ ರೈಲು ಕೂಟಾ ಸ್ಥಗಿತಗೊಳ್ಳುವ ಸೂಚನೆ ಇದೆ.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…