ಸುಬ್ರಹ್ಮಣ್ಯ:ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮಂಗಳೂರು-ಬೆಂಗಳೂರು ರೈಲು ಹಳಿಗೆ ಸಿರಿಬಾಗಿಲು ಹಾಗೂ ಇತರ 4 ಕಡೆ ಹಳಿಗೆ ಮಣ್ಣು ಕುಸಿದ ಪರಿಣಾಮ ರೈಲು ಸಂಚಾರ ಸ್ಥಗಿತಗೊಂಡಿದೆ. ಇಂದು ಬೆಳಗ್ಗೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಿಂದ ಸಕಲೇಶಪುರ ನಡುವಣ ರೈಲು ಹಳಿಯಲ್ಲಿ ಮಣ್ಣು ಕುಸಿತದ ಪರಿಣಾಮ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.
ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಿಂದ ಸಕಲೇಶಪುರ ನಡುವಣ ರೈಲು ಹಳಿಯ 86 ನೇ ಕಿಮೀ ಹಾಗೂ 83 ಹಾಗೂ ಇತರ ಎರಡು ಕಡೆ ಸೇರಿದಂತೆ 4 ಕಡೆಗಳಲ್ಲಿ ಕುಸಿತವಾಗಿದೆ. ಈವರೆಗೆ 86 ನೇ ಕಿಮೀ ಪ್ರದೇಶದ ಮಣ್ಣು ತೆರವು ಕಾರ್ಯ ಪೂರ್ತಿಗೊಂಡಿಲ್ಲ. ತುರ್ತು ಕಾರ್ಯದ ಹಿನ್ನೆಲೆಯಲ್ಲಿ 50 ಕ್ಕೂ ಅಧಿಕ ಕಾರ್ಮಿಕರು ಹಾಗೂ ಯಂತ್ರದ ಮೂಲಕ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಈಗಲೂ ಮಳೆ ಸುರಿಯುತ್ತಿರುವ ಕಾರಣ ಕೆಲಸದ ಪ್ರಗತಿಗೆ ಅಡ್ಡಿಯಾಗಿದೆ. ಮಧ್ಯಾಹ್ನದ ಎರಡೂ ರೈಲುಗಳ ಓಡಾಟ ಸ್ಥಗಿತವಾಗಿತ್ತು. ಇದೀಗ ರಾತ್ರಿ ರೈಲು ಕೂಟಾ ಸ್ಥಗಿತಗೊಳ್ಳುವ ಸೂಚನೆ ಇದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…