ಸುಬ್ರಹ್ಮಣ್ಯ:ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮಂಗಳೂರು-ಬೆಂಗಳೂರು ರೈಲು ಹಳಿಗೆ ಸಿರಿಬಾಗಿಲು ಹಾಗೂ ಇತರ 4 ಕಡೆ ಹಳಿಗೆ ಮಣ್ಣು ಕುಸಿದ ಪರಿಣಾಮ ರೈಲು ಸಂಚಾರ ಸ್ಥಗಿತಗೊಂಡಿದೆ. ಇಂದು ಬೆಳಗ್ಗೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಿಂದ ಸಕಲೇಶಪುರ ನಡುವಣ ರೈಲು ಹಳಿಯಲ್ಲಿ ಮಣ್ಣು ಕುಸಿತದ ಪರಿಣಾಮ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.
ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಿಂದ ಸಕಲೇಶಪುರ ನಡುವಣ ರೈಲು ಹಳಿಯ 86 ನೇ ಕಿಮೀ ಹಾಗೂ 83 ಹಾಗೂ ಇತರ ಎರಡು ಕಡೆ ಸೇರಿದಂತೆ 4 ಕಡೆಗಳಲ್ಲಿ ಕುಸಿತವಾಗಿದೆ. ಈವರೆಗೆ 86 ನೇ ಕಿಮೀ ಪ್ರದೇಶದ ಮಣ್ಣು ತೆರವು ಕಾರ್ಯ ಪೂರ್ತಿಗೊಂಡಿಲ್ಲ. ತುರ್ತು ಕಾರ್ಯದ ಹಿನ್ನೆಲೆಯಲ್ಲಿ 50 ಕ್ಕೂ ಅಧಿಕ ಕಾರ್ಮಿಕರು ಹಾಗೂ ಯಂತ್ರದ ಮೂಲಕ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಈಗಲೂ ಮಳೆ ಸುರಿಯುತ್ತಿರುವ ಕಾರಣ ಕೆಲಸದ ಪ್ರಗತಿಗೆ ಅಡ್ಡಿಯಾಗಿದೆ. ಮಧ್ಯಾಹ್ನದ ಎರಡೂ ರೈಲುಗಳ ಓಡಾಟ ಸ್ಥಗಿತವಾಗಿತ್ತು. ಇದೀಗ ರಾತ್ರಿ ರೈಲು ಕೂಟಾ ಸ್ಥಗಿತಗೊಳ್ಳುವ ಸೂಚನೆ ಇದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…