ಸುಬ್ರಹ್ಮಣ್ಯ:ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮಂಗಳೂರು-ಬೆಂಗಳೂರು ರೈಲು ಹಳಿಗೆ ಸಿರಿಬಾಗಿಲು ಹಾಗೂ ಇತರ 4 ಕಡೆ ಹಳಿಗೆ ಮಣ್ಣು ಕುಸಿದ ಪರಿಣಾಮ ರೈಲು ಸಂಚಾರ ಸ್ಥಗಿತಗೊಂಡಿದೆ. ಇಂದು ಬೆಳಗ್ಗೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಿಂದ ಸಕಲೇಶಪುರ ನಡುವಣ ರೈಲು ಹಳಿಯಲ್ಲಿ ಮಣ್ಣು ಕುಸಿತದ ಪರಿಣಾಮ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.
ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಿಂದ ಸಕಲೇಶಪುರ ನಡುವಣ ರೈಲು ಹಳಿಯ 86 ನೇ ಕಿಮೀ ಹಾಗೂ 83 ಹಾಗೂ ಇತರ ಎರಡು ಕಡೆ ಸೇರಿದಂತೆ 4 ಕಡೆಗಳಲ್ಲಿ ಕುಸಿತವಾಗಿದೆ. ಈವರೆಗೆ 86 ನೇ ಕಿಮೀ ಪ್ರದೇಶದ ಮಣ್ಣು ತೆರವು ಕಾರ್ಯ ಪೂರ್ತಿಗೊಂಡಿಲ್ಲ. ತುರ್ತು ಕಾರ್ಯದ ಹಿನ್ನೆಲೆಯಲ್ಲಿ 50 ಕ್ಕೂ ಅಧಿಕ ಕಾರ್ಮಿಕರು ಹಾಗೂ ಯಂತ್ರದ ಮೂಲಕ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಈಗಲೂ ಮಳೆ ಸುರಿಯುತ್ತಿರುವ ಕಾರಣ ಕೆಲಸದ ಪ್ರಗತಿಗೆ ಅಡ್ಡಿಯಾಗಿದೆ. ಮಧ್ಯಾಹ್ನದ ಎರಡೂ ರೈಲುಗಳ ಓಡಾಟ ಸ್ಥಗಿತವಾಗಿತ್ತು. ಇದೀಗ ರಾತ್ರಿ ರೈಲು ಕೂಟಾ ಸ್ಥಗಿತಗೊಳ್ಳುವ ಸೂಚನೆ ಇದೆ.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…