ಸುಬ್ರಹ್ಮಣ್ಯ:ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮಂಗಳೂರು-ಬೆಂಗಳೂರು ರೈಲು ಹಳಿಗೆ ಸಿರಿಬಾಗಿಲು ಹಾಗೂ ಇತರ 4 ಕಡೆ ಹಳಿಗೆ ಮಣ್ಣು ಕುಸಿದ ಪರಿಣಾಮ ರೈಲು ಸಂಚಾರ ಸ್ಥಗಿತಗೊಂಡಿದೆ. ಇಂದು ಬೆಳಗ್ಗೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಿಂದ ಸಕಲೇಶಪುರ ನಡುವಣ ರೈಲು ಹಳಿಯಲ್ಲಿ ಮಣ್ಣು ಕುಸಿತದ ಪರಿಣಾಮ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.
ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಿಂದ ಸಕಲೇಶಪುರ ನಡುವಣ ರೈಲು ಹಳಿಯ 86 ನೇ ಕಿಮೀ ಹಾಗೂ 83 ಹಾಗೂ ಇತರ ಎರಡು ಕಡೆ ಸೇರಿದಂತೆ 4 ಕಡೆಗಳಲ್ಲಿ ಕುಸಿತವಾಗಿದೆ. ಈವರೆಗೆ 86 ನೇ ಕಿಮೀ ಪ್ರದೇಶದ ಮಣ್ಣು ತೆರವು ಕಾರ್ಯ ಪೂರ್ತಿಗೊಂಡಿಲ್ಲ. ತುರ್ತು ಕಾರ್ಯದ ಹಿನ್ನೆಲೆಯಲ್ಲಿ 50 ಕ್ಕೂ ಅಧಿಕ ಕಾರ್ಮಿಕರು ಹಾಗೂ ಯಂತ್ರದ ಮೂಲಕ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಈಗಲೂ ಮಳೆ ಸುರಿಯುತ್ತಿರುವ ಕಾರಣ ಕೆಲಸದ ಪ್ರಗತಿಗೆ ಅಡ್ಡಿಯಾಗಿದೆ. ಮಧ್ಯಾಹ್ನದ ಎರಡೂ ರೈಲುಗಳ ಓಡಾಟ ಸ್ಥಗಿತವಾಗಿತ್ತು. ಇದೀಗ ರಾತ್ರಿ ರೈಲು ಕೂಟಾ ಸ್ಥಗಿತಗೊಳ್ಳುವ ಸೂಚನೆ ಇದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…